ಬೆಳಗಾವಿ ಬಸವೇಶ್ವರ ವೃತ್ತದಲ್ಲಿ ಕಂಚಿನ ಮೂರ್ತಿ ಪ್ರತಿಷ್ಠಾಪನೆ
Bronze statue installed at Basaveshwara Circle, Belgaum
ಬೆಳಗಾವಿ 20: ನಗರದ ಬಸವೇಶ್ವರ ವೃತ್ತದ ಉದ್ಯಾನವನದಲ್ಲಿ ಮಹಾನ ಮಾನವತಾವಾದಿ, ಜಗಜ್ಯೋತಿ ಬಸವಣ್ಣನವರ ನೂತನ ಕಂಚಿನ ಮೂರ್ತಿ ಪ್ರತಿಷ್ಠಾಪನೆಯನ್ನು ಹಿರಿಯರ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು. ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆಯ ಈ ಸತ್ಕಾರ್ಯದಲ್ಲಿ ಮುತುವರ್ಜಿ ವಹಿಸಿ ಶ್ರಮಿಸಿ ಅನುದಾನ ನೀಡಿದ ಶಾಸಕರಾದ ಅಭಯ ಪಾಟೀಲ, ತಮ್ಮ ಹಿತಾಸಕ್ತಿಯಿಂದ ಈ ಕಾರ್ಯ ಜರುಗುವಂತೆ ಮಾರ್ಗದರ್ಶನ ನೀಡಿ ಸಹಕಾರ ಮಾಡುತ್ತಿರುವ ಕೆಎಲ್ಇ ಸಂಸ್ಥೆಯ ಕಾರ್ಯಕಾರಿ ಕಾರ್ಯಧ್ಯಕ್ಷರಾದ ಪ್ರಭಾಕರ ಕೋರೆ, ಬೆಳಗಾವಿಯ ಹಿರಿಯ ನ್ಯಾಯವಾದಿಗಳು ಸಮಾಜದ ಪ್ರಮುಖರಾದ ಎಮ್ ಬಿ ಜಿರಲಿ , ಮಹಾನಗರ ಪಾಲಿಕೆಯ ಪ್ರಥಮ ಪ್ರಜೆ ಮೇಯರ ಪ್ರೀತಿ ಕಾಮಕರ, ಉಪ ಮಹಾಪೌರರಾದ ಹಮಮಂತ ಕೊಂಗಾಲಿ, ವೀರಶೈವ ಮಹಾಸಭೆಯ ಜಿಲ್ಲಾ ಅಧ್ಯಕ್ಷರಾದ ರತ್ನಕ್ಕ ಬೆಲ್ಲದ, ಶಿವನಗೌಡ ಪಾಟೀಲ, ಬಿಜೆಪಿ ಮುಖಂಡ ಮಹಾಂತೇಶ ವಕ್ಕುಂದ,ಆರ್ ಎಸ್ ಪಾಟೀಲ, ಸೇರಿದಂತೆ ಬಸವಣ್ಣನವರ ಅಭಿಮಾನಿಗಳು, ಹಿರಿಯರು, ಪ್ರಮುಖರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 