ಸಿಡಿಲು ಬಡಿದು ಎಮ್ಮೆ ಸಾವು
Buffalo dies after being struck by lightning
ಕೊಲ್ಹಾರ 15: ಪಟ್ಟಣದಲ್ಲಿ ಸುರಿದ ಗುಡುಗು ಸಹಿತ ಮಳೆಯಿಂದಾಗಿ ಸಿಡಿಲು ಬಡಿದು ಎಮ್ಮೆ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ.ಪಟ್ಟಣದ ಎರಡನೇ ವಾರ್ಡಿನ ಕಲ್ಲಪ್ಪ ಸಂಗಪ್ಪ ಗಣಿ ಅವರಿಗೆ ಸೇರಿದ್ದ ಎಮ್ಮೆಯನ್ನು ಪಕ್ಕದ ಹಣಮಂತ ದೇವಸ್ಥಾನ ಸಮೀಪ ಗಿಡದ ಕೆಳಗೆ ಕಟ್ಟಿದ್ದಾರೆ. ತೆಂಗಿನ ಗಿಡಕ್ಕೆ ಸಿಡಿಲು ಬಡಿದ ಪರಿಣಾಮ ತೀವ್ರತೆಗೆ ಪಕ್ಕದಲ್ಲಿದ್ದ ಎಮ್ಮೆ ಕೂಡಾ ಸಾವನ್ನಪ್ಪಿದ ಘಟನೆ ರಾತ್ರಿ 8:30 ರ ಸುಮಾರಿಗೆ ನಡೆದಿದೆ. ಸಿಡಿಲು ಬಡೆದು ತೆಂಗಿನಗಿಡ ಹೊತ್ತಿ ಉರಿಯುತ್ತಿದ್ದಂತೆ ಸ್ಥಳಿಯರು ಅಗ್ನಿ ಶಾಮಕ ಠಾಣೆಗೆ ಮಾಹಿತಿ ತಿಳಿಸಿದ್ದಾರೆ. ಬೀಳಗಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕೊಲ್ಹಾರ ಘಟನಾ ಸ್ಥಳಕ್ಕೆ ಬರುವಷ್ಟರಲ್ಲಿ ತೆಂಗಿನ ಗಿಡಕ್ಕೆ ಹೊತ್ತಿಕೊಂಡ ಬೆಂಕಿ ಸಂಪೂರ್ಣ ಆರಿ ಹೋಗಿತ್ತು. ಎಮ್ಮೆ ಸಾವಿಗೆ ಸಂಬಂಧಿಸಿದಂತೆ ಶುಕ್ರವಾರ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 