ಸಿಎಬಿ-ಎನ್ಆರ್ಸಿ ವಿರುದ್ಧ ಕೋಲ್ಕತ್ತಾದಲ್ಲಿ ಇಂದು ಬೃಹತ್ ಸಮಾವೇಶ
ಕೋಲ್ಕತಾ, ಡಿ.16 ಪೌರತ್ವ
ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರುದ್ಧ ಕೋಲ್ಕತಾದಲ್ಲಿಂದು
ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನಾ ಜಾಥಾದಲ್ಲಿ ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಭಾಗವಹಿಸಲಿದ್ದಾರೆ.ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆಯಿಂದ ಜಾಥಾ ಮಧ್ಯಾಹ್ನ 1 ಗಂಟೆಗೆ ಆರಂಭಗೊಂಡು,
ಜೊರಸಂಕೊ ಠಾಕೂರ್ಬರಿಯಲ್ಲಿ ಸಮಾರೋಪಗೊಳ್ಳಲಿದೆ.ದೇಶದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು
ಸಮಾಜದ ಎಲ್ಲಾ ವರ್ಗಗಳ ಜನರು ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಬ್ಯಾನರ್ಜಿ ಮನವಿ ಮಾಡಿದ್ದಾರೆ. ಸಿಎಬಿ
ಮತ್ತು ಎನ್ಆರ್ಸಿ ವಿರುದ್ಧ ತೃಣಮೂಲ ಕಾಂಗ್ರೆಸ್ ನಿಲುವು ತಳೆದಿದೆ.ಬಂಗಾಳದಲ್ಲಿ ಎನ್ಆರ್ಸಿ ಮತ್ತು
ಸಿಎಬಿ ಜಾರಿಗೆ ಅವಕಾಶ ನೀಡುವುದಿಲ್ಲ. ಸಂಸತ್ನಲ್ಲಿ ಅಂಗೀಕಾರಗೊಂಡರೂ ನಾವು ಅದನ್ನು ಜಾರಿಗೊಳಿಸುವುದಿಲ್ಲ.
ನಮ್ಮನ್ನು ಹೆದರಿಸಿ ಇದನ್ನು ಜಾರಿಗೊಳಿಸಲು ಬಿಜೆಪಿಗೆ ಸಾಧ್ಯವಿಲ್ಲ ಎಂದು ಈಗಾಗಲೇ ಮುಖ್ಯಮಂತ್ರಿ
ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 