ಕೊರೊನಾ ಭೀತಿ: ವಿದೇಶ ಪ್ರವಾಸ ರದ್ದುಪಡಿಸಿದ ಚಿತ್ರತಂಡ
ಬೆಂಗಳೂರು, ಮಾ.3, ಕೊರೊನಾ ಭೀತಿ ಸ್ಯಾಂಡಲ್ ವುಡ್ ಚಿತ್ರಕ್ಕೂ ತಟ್ಟಿದೆ.ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯಿಸುತ್ತಿರುವ ಯುವರತ್ನ ಚಿತ್ರದ ಚಿತ್ರೀಕರಣ ವಿದೇಶದಲ್ಲಿ ನಡೆಯಬೇಕಿತ್ತು.ಇದೇ ತಿಂಗಳು 3ರಿಂದ 7ರವರೆಗೆ ವಿದೇಶದಲ್ಲಿ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಮಾಡಿಕೊಂಡಿತ್ತು. ಅಲ್ಲದೇ, ಮುಂಗಡವಾಗಿ ಸ್ಲೋವೆನಿಯಾದಲ್ಲಿ ಹೋಟೆಲ್ ಕೂಡ ಬುಕ್ ಮಾಡಿಕೊಂಡಿತ್ತು. ಆದರೀಗ, ಕೊರೊನಾ ಭೀತಿಯಿಂದ ಚಿತ್ರತಂಡ ಚಿತ್ರೀಕರಣಕ್ಕೆ ತೆರಳಲು ಹಿಂದೇಟು ಹಾಕಿದೆ ಎನ್ನಲಾಗಿದೆ.ಸಂತೋಷ್ ಆನಂದ್ರಾಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಟಾಲಿವುಡ್ ಮೂಲಕ ಬಣ್ಣದಲೋಕ ಪ್ರವೇಶಿಸಿದ್ದ ಸಯೇಷಾ ಸೈಗಲ್ ಪುನೀತ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ.ಚಿತ್ರಕ್ಕೆ ವಿಜಯ್ ಕಿರಗಂದೂರ್ ಬಂಡವಾಳ ಹೂಡಿದ್ದು, ಎಸ್. ತಮನ್ ಸಂಗೀತ ಸಂಯೋಜಿಸಿದ್ದಾರೆ.ಇನ್ನು ಚಿತ್ರಕ್ಕೆ ವೆಂಕಟೇಶ್ ಅಂಗುರಾಜ್ ಅವರ ಛಾಯಾಗ್ರಹಣವಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 