ಕೊರೊನಾ ಭೀತಿ: ವಿದೇಶ ಪ್ರವಾಸ ರದ್ದುಪಡಿಸಿದ ಚಿತ್ರತಂಡ
ಬೆಂಗಳೂರು, ಮಾ.3, ಕೊರೊನಾ ಭೀತಿ ಸ್ಯಾಂಡಲ್ ವುಡ್ ಚಿತ್ರಕ್ಕೂ ತಟ್ಟಿದೆ.ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯಿಸುತ್ತಿರುವ ಯುವರತ್ನ ಚಿತ್ರದ ಚಿತ್ರೀಕರಣ ವಿದೇಶದಲ್ಲಿ ನಡೆಯಬೇಕಿತ್ತು.ಇದೇ ತಿಂಗಳು 3ರಿಂದ 7ರವರೆಗೆ ವಿದೇಶದಲ್ಲಿ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಮಾಡಿಕೊಂಡಿತ್ತು. ಅಲ್ಲದೇ, ಮುಂಗಡವಾಗಿ ಸ್ಲೋವೆನಿಯಾದಲ್ಲಿ ಹೋಟೆಲ್ ಕೂಡ ಬುಕ್ ಮಾಡಿಕೊಂಡಿತ್ತು. ಆದರೀಗ, ಕೊರೊನಾ ಭೀತಿಯಿಂದ ಚಿತ್ರತಂಡ ಚಿತ್ರೀಕರಣಕ್ಕೆ ತೆರಳಲು ಹಿಂದೇಟು ಹಾಕಿದೆ ಎನ್ನಲಾಗಿದೆ.ಸಂತೋಷ್ ಆನಂದ್ರಾಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಟಾಲಿವುಡ್ ಮೂಲಕ ಬಣ್ಣದಲೋಕ ಪ್ರವೇಶಿಸಿದ್ದ ಸಯೇಷಾ ಸೈಗಲ್ ಪುನೀತ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ.ಚಿತ್ರಕ್ಕೆ ವಿಜಯ್ ಕಿರಗಂದೂರ್ ಬಂಡವಾಳ ಹೂಡಿದ್ದು, ಎಸ್. ತಮನ್ ಸಂಗೀತ ಸಂಯೋಜಿಸಿದ್ದಾರೆ.ಇನ್ನು ಚಿತ್ರಕ್ಕೆ ವೆಂಕಟೇಶ್ ಅಂಗುರಾಜ್ ಅವರ ಛಾಯಾಗ್ರಹಣವಿದೆ.
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ 