ಕೊರೋನಾ ಭೀತಿ: ವಸಂತ ಪಂಚಮಿ ಉತ್ಸವ ರದ್ದು
ಶಾಂತಿನಿಕೇತನ, ಮಾ 07, ಚೀನಾದಲ್ಲಿ ಪತ್ತೆಯಾಗಿ, ಪ್ರಸ್ತುತ ವಿಶ್ವಚ ವಿವಿಧ ರಾಷ್ಟ್ರಗಳಲ್ಲಿ ಹರಡಿರುವ ಕೊರೋನಾ ವೈರಸ್ ತೀವ್ರ ಆತಂಕ ಸೃಷ್ಟಿಸಿದೆ. ಭಾರತದಲ್ಲಿಯೂ ಕೊರೋನಾ ಭೀತಿ ಎದುರಾಗಿರುವ ಕಾರಣ ಕೇಂದ್ರ ಹಾಗೂ ರಾಜ್ಯಸರ್ಕಾರಗಳು ವೈರಾಣು ನಿಗ್ರಹಕ್ಕೆ ವ್ಯಾಪಕ ಕಟ್ಟೆಚ್ಚರ ಕೈಗೊಂಡಿದ್ದು, ಅತಿಹೆಚ್ಚು ಜನರು ಒಂದೆಡೆ ಸೇರದಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ, ಶಾಂತಿನಿಕೇತನದ ವಿಶ್ವ ಭಾರತಿ ವಿಶ್ವವಿದ್ಯಾಲಯದ ಅಧಿಕಾರಿಗಳು, ಈ ವರ್ಷ ವಸಂತ ಪಂಚಮಿ ಉತ್ಸವ ನಡೆಸದಿರಲು ನಿರ್ಧರಿಸಿದ್ದಾರೆ. ಹೋಳಿ ಹಬ್ಬದ ಸಂಕೇತವಾಗಿ ವಿಶ್ವ ವಿದ್ಯಾಲಯದ ಆವರಣದಲ್ಲಿ ಪ್ರತಿ ವರ್ಷ ನಡೆಸಲಾಗುವ ವಸಂತ ಪಂಚಮಿ ಉತ್ಸವದಲ್ಲಿ ಸಾವಿರಾರು ಜನರು ಭಾಗವಹಿಸುತ್ತಾರೆ. ಈ ಸಂದರ್ಭದಲ್ಲಿ ವೈರಾಣು ಒಬ್ಬರಿಂದೊಬ್ಬರಿಗೆ ಹಡುವ ಸಾಧ್ಯತೆ ಹೆಚ್ಚಿರುವ ಕಾರಣ, ಉತ್ಸವ ರದ್ದುಪಡಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 