ಸುಪ್ರೀಂ ಮೊರೆ ಹೋದ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ
ನವದೆಹಲಿ 30: ವರ್ಗಾವಣೆ ಪ್ರಶ್ನಿಸಿ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಆದರೆ ನ್ಯಾಯಾಲಯ ಪ್ರಕರಣದ ತುರ್ತು ವಿಚಾರಣೆಗೆ ನಿರಾಕರಿಸಿದೆ.
ಎ ಕೆ ಬಸ್ಸಿ ರಾಕೇಶ್ ಅಸ್ತಾನಾ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದ್ದರು.ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಎ ಕೆ ಬಸ್ಸಿ, ಲಂಚ ಪ್ರಕರಣದಲ್ಲಿ ರಾಕೇಶ್ ಅಸ್ತಾನಾ ವಿರುದ್ಧ ತಮ್ಮ ಬಳಿ ದೋಷಾರೋಪಣಾ ಸಾಕ್ಷಿಗಳಿದ್ದು ತಾಂತ್ರಿಕ ಕಣ್ಗಾವಲಿಗೆ ಸಾಕ್ಷಿಗಳನ್ನು ಕರೆಯಬೇಕೆಂದು ಸಹ ನ್ಯಾಯಾಲಯವನ್ನು ಕೋರಿರುವುದಾಗಿ ತಿಳಿಸಿದ್ದಾರೆ.
ಅಸ್ತಾನಾ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸಂಬಂಧಪಟ್ಟಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಬೇಕೆಂದು ಅವರು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.
ಎ ಕೆ ಬಸ್ಸಿ ಅವರನ್ನು ಸಾರ್ವಜನಿಕ ಹಿತಾಸಕ್ತಿ ಕಾರಣ ನೀಡಿ ಪೋರ್ಟ್ ಬ್ಲೇರ್ ಅಂಡಮಾನ್ ಜೈಲ್ ಗೆ ವರ್ಗಾಯಿಸಲಾಗಿತ್ತು. ಈ ಹಿಂದೆ ಕೇಂದ್ರ ಜಾಗೃತ ಆಯೋಗಕ್ಕೆ ದೂರು ನೀಡಿದ್ದ ಅಸ್ತಾನಾ, ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ನಿರ್ದೇಶನದ ಮೇರೆಗೆ ಬಸ್ಸಿ ನನ್ನ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಬಸ್ಸಿ ಹಾಗೂ ಜಂಟಿ ನಿರ್ದೇಶಕ ಎ ಕೆ ಶರ್ಮ ಅವರನ್ನು ನನ್ನ ವಿರುದ್ಧ ಮಾಹಿತಿ ಸಂಗ್ರಹಿಸಲು ಗುಜರಾತ್ ಗೆ ಕಳುಹಿಸಲಾಗಿತ್ತು ಎಂದು ಆರೋಪಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 