ಬೆಂಗಳೂರಿನ ವಿವಿಧೆಡೆ ಸಿಸಿಬಿ ದಾಳಿ; ಮದ್ಯ, ತಂಬಾಕು ಉತ್ಪನ್ನ ವಶ
ಬೆಂಗಳೂರು,
ಏ.18, ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಜಾರಿಯಲ್ಲಿದ್ದರೂ ಅಕ್ರಮವಾಗಿ
ಮದ್ಯ, ಸಿಗರೇಟ್, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ
ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ರಾಮಮೂರ್ತಿ ನಗರದಲ್ಲಿ ದಾಳಿ ನಡೆಸಿ, 1
ಸಾವಿರ ಟೆಟ್ರಾ ಪ್ಯಾಕ್ ವಿಸ್ಕಿ ಹಾಗೂ ಕೆಂಗೇರಿಯಲ್ಲಿ ತಂಬಾಕು ಉತ್ಪನ್ನಗಳನ್ನು
ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆಅಲ್ಲದೆ, ಆರ್ಎಂಸಿ
ಯಾರ್ಡ್ನಲ್ಲಿ ಪಿಎಂಎಚ್ ಟ್ರೇಡರ್ಸ್ ಮಳಿಗೆ ಮೇಲೆ ದಾಳಿ ನಡೆಸಿದ ಸಿಸಿಬಿ
ಅಧಿಕಾರಿಗಳು, 1.96 ಲಕ್ಷ ರೂ ಮೌಲ್ಯದ 560 ಬಂಡಲ್ ನ 11 ಸಾವಿರದ 200 ಪ್ಯಾಕ್ಸ್
ಬೀಡಿಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರ್ ಎಂ ಸಿ ಯಾರ್ಡ್
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು, ಕೊಡಿಗೇಹಳ್ಳಿಯ ಲಿಕ್ಕರ್ ಶಾಪ್ ಮೇಲೂ
ಸಿಸಿಬಿ ಪೊಲೀಸರು ದಾಳಿ ನಡೆಸಿ, 17 ಲೀಟರ್ ನ 96 ಪೌಚಸ್ ಗಳ 180 ಎಂಎಲ್ ಲಿಕ್ಕರ್
ಜಪ್ತಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 