ಮಕ್ಕಳ ಹಿತಕ್ಕಿಂತ ನಿಮ್ಮ ಪ್ರತಿಷ್ಠೆ ಪ್ರಮುಖವಲ್ಲ: ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಶಿಕ್ಷಣ ಸಚಿವರು ಗರಂ
ಬೆಂಗಳೂರು,ಮಾ.11,ಸರ್ಕಾರದ ಆದೇಶ ಪಾಲಿಸದ ಕೆಲವು ಶಾಲೆಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ನಗರ (ಜಿಲ್ಲೆ) ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪೂರ್ವ ಪ್ರಾಥಮಿಕ, ಎಲ್ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಶಾಲೆಗಳ ತರಗತಿಗಳಿಗೆ (1 ರಿಂದ 5) ರಜೆ ಘೋಷಿಸಲಾಗಿದೆ. ಈ ಆದೇಶವನ್ನು ಪಾಲಿಸುವುದು ಈ ಪ್ರದೇಶಗಳಲ್ಲಿರುವ ಎಲ್ಲಾ ಶಾಲೆಗಳ ಕರ್ತವ್ಯ. ಕೆಲವು ಖಾಸಗಿ ಶಾಲೆಗಳು ಸರ್ಕಾರದ ಈ ಆದೇಶಕ್ಕೆ ಗೌರವ ಕೊಡದೇ ತಮ್ಮದೇ ಬೇರೆ ಸಾಮ್ರಾಜ್ಯ ಎಂದು ತಿಳಿದು ವ್ಯತಿರಿಕ್ತವಾಗಿ ವರ್ತಿಸುತ್ತಿರುವುದು ತಿಳಿದುಬಂದಿದೆ. ರಾಜ್ಯ ಸರ್ಕಾರದ ಆದೇಶವನ್ನು ಪಾಲಿಸದೆ ಇರುವ ಖಾಸಗಿ ಶಾಲೆಗಳಿಗೆ ಈ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.ಸರ್ಕಾರದ ಆದೇಶ ಪಾಲಿಸದಿರುವ ಶಾಲೆಗಳು, ಅದೆಷ್ಟೇ "ಪ್ರಭಾವಶಾಲಿ"ಯಾಗಿದ್ದರೂ ತಿಳಿದುಕೊಂಡಿದ್ದರೂ ಅವುಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಎಳೆ ಮಕ್ಕಳ ಹಿತದೃಷ್ಟಿಯಿಂದ ಎಂದು ಮನಗಾಣಬೇಕು ಎಂದು ಅವರು ತಿಳಿಸಿದ್ದಾರೆ.ಸರ್ಕಾರದ ಆದೇಶ ಪಾಲಿಸದಿರುವುದು ನಮ್ಮ ಪ್ರತಿಷ್ಠೆ ಎಂದುಕೊಂಡಿರುವ ಆ ಎಲ್ಲಾ ಶಾಲೆಗಳಿಗೆ ಇದೊಂದು " ಕಿವಿಮಾತು". "ಮಕ್ಕಳ ಹಿತಕ್ಕಿಂತ ನಿಮ್ಮ ಪ್ರತಿಷ್ಠೆ ಪ್ರಮುಖವಲ್ಲ" ಎಂದು ಶಿಕ್ಷಣ ಸಚಿವರು ಫೇಸ್ಬುಕ್ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 