ಉತ್ತರಪ್ರದೇಶ : ಭಾರಿ ಮಳೆ ಗಾಳಿಗೆ ಬೆಳೆ ಹಾನಿ
ಬಸ್ತಿ, ಮಾ 07, ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಬೀಸುತ್ತಿರುವ ಬಲವಾದ ಗಾಳಿಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ. ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಲವಾಗಿ ಬೀಸಿದ ಗಾಳಿಗೆ ಗೋಧಿ, ಅವರೆಕಾಳು, ಸಾಸಿವೆ ಮುಂತಾದ ಬೆಳೆಗಳಿಗೆ ಹಾನಿಯಾಗಿದೆ ಎನ್ನಲಾಗಿದೆ. ಕೇವಲ 15 ದಿನಗಳ ಹಿಂದಷ್ಟೇ ಗೋಧಿಯನ್ನು ಬಿತ್ತನೆ ಮಾಡಲಾಗಿತ್ತು. ಸಾಸಿವೆ ಬೆಳೆ ಹೂ ಬಿಟ್ಟಿತ್ತು. ಆದರೆ ಇವೆಲ್ಲ ಈಗ ಮಳೆನೀರಿನ ಪಾಲಾಗಿವೆ. ಇದಲ್ಲದೆ ಮಾವು ಬೆಳೆಯೂ ನಷ್ಟವಾಗಿದೆ. ಜೋರಾದ ಗಾಳಿಗೆ ಹೂ ಬಿಟ್ಟಿದ್ದ ಮಾವಿನ ಮರದ ಕೊಂಬೆಗಳು ಮುರಿದಿದ್ದು, ರೈತರು ಕಂಗಾಲಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 