ಬಂದರು ಟ್ರಸ್ಟ್, ಹಡಗುಕಟ್ಟೆ ಕಾರ್ಮಿಕ ಮಂಡಳಿ ಉದ್ಯೋಗಿಗಳಿಗೆ ಪಿಎಲ್ಆರ್ ಯೋಜನೆ ವಿಸ್ತರಣೆಗೆ ಸಚಿವ ಸಂಪುಟ ಒಪ್ಪಿಗೆ
ನವದೆಹಲಿ, ಜ 29: ಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲವೇ ತಿದ್ದುಪಡಿ ಮಾಡುವವರೆಗೆ ಸದ್ಯ, ಅಸ್ತಿತ್ವದಲ್ಲಿರುವ ಉತ್ಪಾದಕತೆ ಜೋಡಣೆ ಪುರಸ್ಕಾರ (ಪಿಎಲ್ಆರ್) ಯೋಜನೆಯನ್ನು 2017-18ರ ಆಚೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಈ ಯೋಜನೆಯಿಂದ ವಾರ್ಷಿಕವಾಗಿ 28,821 ಪ್ರಮುಖ ಬಂದರು ಟ್ರಸ್ಟ್ಗಳು ಮತ್ತು ಹಡಗುಕಟ್ಟೆ ಉದ್ಯೋಗಿಗಳಿಗೆ ಪ್ರಯೋಜನವಾಗಲಿದೆ. ಪ್ರಸ್ತುತ ವೇತನ ಮಿತಿಯಲ್ಲಿ ತಿಂಗಳಿಗೆ 7,000 ರೂ.ನಂತೆ ಉತ್ಪಾದಕತೆ ಸಂಯೋಜನೆ ಪುರಸ್ಕಾರ ಲೆಕ್ಕಹಾಕಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಯೋಜನೆಯು ಉತ್ತಮ ಉತ್ಪಾದಕತೆಯನ್ನು ಉತ್ತೇಜಿಸುವುದರೊಂದಿಗೆ ಬಂದರು ವಲಯದಲ್ಲಿ ಉತ್ತಮ ಕೈಗಾರಿಕಾ ಸಂಬಂಧ ಮತ್ತು ಕೆಲಸದ ವಾತಾವರಣವನ್ನು ಬೆಳೆಸುತ್ತಿದೆ.
ಪ್ರಮುಖ ಬಂದರು ಟ್ರಸ್ಟ್ಗಳು ಮತ್ತು ಹಡಗುಕಟ್ಟೆ ಮಂಡಳಿ ಉದ್ಯೋಗಿಗಳಿಗೆ ಉತ್ಪಾದಕತೆ ಸಂಯೋಜನೆಯ ಪುರಸ್ಕಾರ ನೀಡುವ ಯೋಜನೆ ಅಸ್ತಿತ್ವದಲ್ಲಿದೆ. ಇದರಲ್ಲಿ ಉತ್ಪಾದಕತೆ ಸಂಯೋಜನೆ ಪುರಸ್ಕಾರವನ್ನು ಸಂಯೋಜಿತ ಬಂದರುಗಳ ಕಾರ್ಯಕ್ಷಮತೆ ಸೂಚ್ಯಂಕದ ಆಧಾರದ ಮೇಲೆ ನೀಡಲಾಗುತ್ತದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 