ಬೆಳ್ಳಿ-ಬೆಡಗು ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ
ಲೋಕದರ್ಶನ ವರದಿ
ಮುನವಳ್ಳಿ 9: ಇದೇ ಜ. 14 ಮತ್ತು 15 ರಂದು ಹರಿಹರ ದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಹಾಗೂ ಪಂಚಮಸಾಲಿ ಜಗದ್ಗುರು ಪೀಠದಿಂದ ಜರುಗುವ ಹರಜಾತ್ರಾ ಮಹೋತ್ಸವ ಮತ್ತು ಬೆಳ್ಳಿ-ಬೆಡಗು ಕಾರ್ಯಕ್ರಮದ ಹಿನ್ನಲೆಯಲ್ಲಿ ಪಟ್ಟಣದ ಪಂಚಮಸಾಲಿ ಸಂಘದ ವತಿಯಿಂದ ಪೂರ್ವಭಾವಿ ಸಭೆ ಜ. 8 ರಂದು ರಾತ್ರಿ ಜರುಗಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಂಘದ ಮುಖಂಡರಾದ ಶಿವಾನಂದ ಮೇಟಿ ಹಾಗೂ ಕಲ್ಲಪ್ಪ ನಲವಡೆ ಪಂಚಮಸಾಲಿ ಸಂಘ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಬೆಳ್ಳಿ-ಬೆಡಗು ಕಾರ್ಯಕ್ರಮ ಜೊತೆಗೆ ಯುವ ಸಮಾವೇಶ ಮತ್ತು ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಬಂಧು ಬಾಂಧವರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಲಾಯಿತು.
ಈ ಸಂದರ್ಭದಲ್ಲಿ ಪಂಚಪ್ಪ ಹನಸಿ, ರವಿ ದ್ಯಾಮನಗೌಡರ, ರುದ್ರಗೌಡ ಕಳಸನಗೌಡ್ರ, ಚನ್ನಪ್ಪಗೌಡ ದ್ಯಾಮನಗೌಡ್ರ, ಎಂ.ಎ. ಕಮತಗಿ, ದ್ಯಾಮನಗೌಡ ಬಕಾಡೆ, ರಾಮನಗೌಡ ಗೀದಿಗೌಡ್ರ,ಸತ್ಯಪ್ಪ ಅಡವಿ,ಶ್ರೀಕಾಂತ ಮಲಗೌಡ್ರ, ಸುಭಾಸ ಗೀದಿಗೌಡ್ರ, ಬಸವರಾಜ ಚುಳಕಿ, ಮಂಜುನಾಥ ನವಲಗುಂದ, ರಮೇಶ ಗಂಗನ್ನವರ, ಗುರು ಚಂದರಗಿ,ಉಮೇಶ ಚುಳಕಿ ಇತರರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 