ಪ್ಲಾಸ್ಟಿಕ್ ಮಾಲಿನ್ಯ ತಡೆಯಲು ಕರೆ
ಬೆಳಗಾವಿ, 1: ದಿನ ನಿತ್ಯ ಜೀವನದಲ್ಲಿ ಅತಿಯಾಗಿ ಪ್ಲಾಸ್ಟಿಕ್ ಬಳಸಿ ಬಿಸಾಡುತ್ತಿರುವುದರಿಂದ ಅವುಗಳನ್ನು ತಿನ್ನುವ ಜಾನುವಾರಗಳು, ಜಲಚರಗಳು ನಿರಂತರವಾಗಿ ಸಾವನ್ನಪ್ಪುತ್ತಿವೆ. ನಾವೆಲ್ಲ ಪ್ಲಾಸ್ಟಿಕ್ ಮಾಲಿನ್ಯ ತಡೆಯಲು ಶ್ರಮಿಸೋಣ ಎಂದು ಪರಿಸರ ಮಿತ್ರ ಸಂಘದ ಅಧ್ಯಕ್ಷರಾದ ಪ್ರೊ|| ಜಿ. ಕೆ. ಖಡಬಡಿ ಅಭಿಪ್ರಾಯಪಟ್ಟರು. ಅವರು ಇಂದು ನಗರದ ಡಾ// ಸ.ಜ. ನಾಗಲೋಟಿಮಠ ವಿಜ್ಞಾನ ಕೇಂದ್ರಕ್ಕೆ ತಮ್ಮ ಜನ್ಮ ದಿನದ ಅಂಗವಾಗಿ ಸಸಿ ವಿತರಿಸಿ ಮಾತನಾಡಿದರು.
ಮುಂದುವರೆದು ಮಾತನಾಡಿದ ಅವರು ನಮಗಿರುವುದು ಇದು ಒಂದೇ ಭೂಮಿ ಈ ಭೂಮಿಯ ಮೇಲಿನ ಪರಿಸರ ಉಳಿಸಿ, ಬೆಳೆಸಿ ಆ ಮೂಲಕ ಮನುಕುಲ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಕರಾಮಾನಿ ಮಂಡಳಿಯ ಅಧಿಕಾರಿಗಳಾದ ಡಾ|| ಜಿ. ಎಂ. ಪಾಟೀಲ, ವಿಜ್ಞಾನ ಕೇಂದ್ರದ ಯೋಜನಾ ಸಹಾಯಕ ರಾಜಶೇಖರ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 