ಪ್ಲಾಸ್ಟಿಕ್ ಮಾಲಿನ್ಯ ತಡೆಯಲು ಕರೆ
ಬೆಳಗಾವಿ, 1: ದಿನ ನಿತ್ಯ ಜೀವನದಲ್ಲಿ ಅತಿಯಾಗಿ ಪ್ಲಾಸ್ಟಿಕ್ ಬಳಸಿ ಬಿಸಾಡುತ್ತಿರುವುದರಿಂದ ಅವುಗಳನ್ನು ತಿನ್ನುವ ಜಾನುವಾರಗಳು, ಜಲಚರಗಳು ನಿರಂತರವಾಗಿ ಸಾವನ್ನಪ್ಪುತ್ತಿವೆ. ನಾವೆಲ್ಲ ಪ್ಲಾಸ್ಟಿಕ್ ಮಾಲಿನ್ಯ ತಡೆಯಲು ಶ್ರಮಿಸೋಣ ಎಂದು ಪರಿಸರ ಮಿತ್ರ ಸಂಘದ ಅಧ್ಯಕ್ಷರಾದ ಪ್ರೊ|| ಜಿ. ಕೆ. ಖಡಬಡಿ ಅಭಿಪ್ರಾಯಪಟ್ಟರು. ಅವರು ಇಂದು ನಗರದ ಡಾ// ಸ.ಜ. ನಾಗಲೋಟಿಮಠ ವಿಜ್ಞಾನ ಕೇಂದ್ರಕ್ಕೆ ತಮ್ಮ ಜನ್ಮ ದಿನದ ಅಂಗವಾಗಿ ಸಸಿ ವಿತರಿಸಿ ಮಾತನಾಡಿದರು.
ಮುಂದುವರೆದು ಮಾತನಾಡಿದ ಅವರು ನಮಗಿರುವುದು ಇದು ಒಂದೇ ಭೂಮಿ ಈ ಭೂಮಿಯ ಮೇಲಿನ ಪರಿಸರ ಉಳಿಸಿ, ಬೆಳೆಸಿ ಆ ಮೂಲಕ ಮನುಕುಲ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಕರಾಮಾನಿ ಮಂಡಳಿಯ ಅಧಿಕಾರಿಗಳಾದ ಡಾ|| ಜಿ. ಎಂ. ಪಾಟೀಲ, ವಿಜ್ಞಾನ ಕೇಂದ್ರದ ಯೋಜನಾ ಸಹಾಯಕ ರಾಜಶೇಖರ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 