ಕ್ಯಾನ್ಸರ್ ವಿರುದ್ಧ ಪ್ರಚಾರ ಅಭಿಯಾನ ಚುರುಕುಗೊಳಿಸಬೇಕಿದೆ: ಸಂಸದ ಪೋದ್ದಾರ್
ನವದೆಹಲಿ, ಫೆ .06, ದೇಶದ ಜನರ ಸಾವಿಗೆ ಎರಡನೇ ಅತಿದೊಡ್ಡ ಕಾರಣವಾಗಿ ಹೊರಹೊಮ್ಮಿರುವ ಮಾರಣಾಂತಿಕ ಕಾಯಿಲೆ ಕ್ಯಾನ್ಸರ್ ವಿರುದ್ಧ ಪ್ರಚಾರ ಅಭಿಯಾನವನ್ನು ಚುರುಕುಗೊಳಿಸುವಂತೆ ಬಿಜೆಪಿ ಶಾಸಕ ಮಹೇಶ್ ಪೋದ್ದಾರ್ ರಾಜ್ಯಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದೇಶದಲ್ಲಿ ಹೆಚ್ಚಿನ ಕ್ಯಾನ್ಸರ್ ನಿಯಂತ್ರಣ ಸಂಸ್ಥೆಗಳನ್ನು ಸ್ಥಾಪಿಸಬೇಕು ಇದರಿಂದಾಗಿ ಹೆಚ್ಚಿನ ರೋಗಿಗಳು ಶೀಘ್ರದಲ್ಲಿಯೇ ಚಿಕಿತ್ಸೆ ಪಡೆಯುತ್ತಾರೆ ಎಂದು ಸರ್ಕಾರಕ್ಕೆ ಮನವಿ ಮಾಡಿದ ಪೋದ್ದಾರ್, ಇತ್ತೀಚಿನ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ವರದಿಯನ್ನು ಉಲ್ಲೇಖಿಸಿ, ಹತ್ತು ಜನರಲ್ಲಿ ಒಬ್ಬರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಮತ್ತು ಪ್ರತಿ 15 ಜನರಲ್ಲಿ ಒಬ್ಬರು ಸಾವನ್ನಪ್ಪುತ್ತಾರೆ ಎಂದು ರಾಜ್ಯಸಭೆಗೆ ತಿಳಿಸಿದರು. ಮತ್ತೊಬ್ಬ ಬಿಜೆಪಿ ಶಾಸಕ ವಿನಯ್ ಸಹಸ್ರಬುದ್ದೆ ಅವರು ಅಂಗವಿಕಲರಿಗೆ ಅಥವಾ 'ದಿವ್ಯಾಂಗ’ ರಿಗಾಗಿ ರಾಂಪ್ಗಳ ವಿನ್ಯಾಸವನ್ನು ಸುಧಾರಿಸಬೇಕು ಹಾಗೂ ಅಂಗವಿಕಲರ ಖಾಲಿ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಒತ್ತಾಯಿಸಿದರು.ದೇಶದಲ್ಲಿ ಪೊಲೀಸ್ ಸಿಬ್ಬಂದಿಗೆ ಹೆಚ್ಚಿನ ತರಬೇತಿ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಬಿಜೆಪಿ ಸದಸ್ಯ ಸಂಜಯ್ ಸೇಠ್ ಒತ್ತಾಯಿಸಿದರು. ಐದು ಲಕ್ಷಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ ಹುದ್ದೆಗಳು ಖಾಲಿ ಇವೆ ಮತ್ತು ಉತ್ತರ ಪ್ರದೇಶದಲ್ಲಿ ಮಾತ್ರ ಈ ಸಂಖ್ಯೆ ಒಂದು ಲಕ್ಷದಷ್ಟಿದೆ ಎಂದು ಅವರು ಹೇಳಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 