ಕ್ಯಾನ್ಸರ್ ವಿರುದ್ಧ ಪ್ರಚಾರ ಅಭಿಯಾನ ಚುರುಕುಗೊಳಿಸಬೇಕಿದೆ: ಸಂಸದ ಪೋದ್ದಾರ್
ನವದೆಹಲಿ, ಫೆ .06, ದೇಶದ ಜನರ ಸಾವಿಗೆ ಎರಡನೇ ಅತಿದೊಡ್ಡ ಕಾರಣವಾಗಿ ಹೊರಹೊಮ್ಮಿರುವ ಮಾರಣಾಂತಿಕ ಕಾಯಿಲೆ ಕ್ಯಾನ್ಸರ್ ವಿರುದ್ಧ ಪ್ರಚಾರ ಅಭಿಯಾನವನ್ನು ಚುರುಕುಗೊಳಿಸುವಂತೆ ಬಿಜೆಪಿ ಶಾಸಕ ಮಹೇಶ್ ಪೋದ್ದಾರ್ ರಾಜ್ಯಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದೇಶದಲ್ಲಿ ಹೆಚ್ಚಿನ ಕ್ಯಾನ್ಸರ್ ನಿಯಂತ್ರಣ ಸಂಸ್ಥೆಗಳನ್ನು ಸ್ಥಾಪಿಸಬೇಕು ಇದರಿಂದಾಗಿ ಹೆಚ್ಚಿನ ರೋಗಿಗಳು ಶೀಘ್ರದಲ್ಲಿಯೇ ಚಿಕಿತ್ಸೆ ಪಡೆಯುತ್ತಾರೆ ಎಂದು ಸರ್ಕಾರಕ್ಕೆ ಮನವಿ ಮಾಡಿದ ಪೋದ್ದಾರ್, ಇತ್ತೀಚಿನ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ವರದಿಯನ್ನು ಉಲ್ಲೇಖಿಸಿ, ಹತ್ತು ಜನರಲ್ಲಿ ಒಬ್ಬರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಮತ್ತು ಪ್ರತಿ 15 ಜನರಲ್ಲಿ ಒಬ್ಬರು ಸಾವನ್ನಪ್ಪುತ್ತಾರೆ ಎಂದು ರಾಜ್ಯಸಭೆಗೆ ತಿಳಿಸಿದರು. ಮತ್ತೊಬ್ಬ ಬಿಜೆಪಿ ಶಾಸಕ ವಿನಯ್ ಸಹಸ್ರಬುದ್ದೆ ಅವರು ಅಂಗವಿಕಲರಿಗೆ ಅಥವಾ 'ದಿವ್ಯಾಂಗ’ ರಿಗಾಗಿ ರಾಂಪ್ಗಳ ವಿನ್ಯಾಸವನ್ನು ಸುಧಾರಿಸಬೇಕು ಹಾಗೂ ಅಂಗವಿಕಲರ ಖಾಲಿ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಒತ್ತಾಯಿಸಿದರು.ದೇಶದಲ್ಲಿ ಪೊಲೀಸ್ ಸಿಬ್ಬಂದಿಗೆ ಹೆಚ್ಚಿನ ತರಬೇತಿ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಬಿಜೆಪಿ ಸದಸ್ಯ ಸಂಜಯ್ ಸೇಠ್ ಒತ್ತಾಯಿಸಿದರು. ಐದು ಲಕ್ಷಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ ಹುದ್ದೆಗಳು ಖಾಲಿ ಇವೆ ಮತ್ತು ಉತ್ತರ ಪ್ರದೇಶದಲ್ಲಿ ಮಾತ್ರ ಈ ಸಂಖ್ಯೆ ಒಂದು ಲಕ್ಷದಷ್ಟಿದೆ ಎಂದು ಅವರು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 