ಕಾರು ಅಪಘಾತ: ನಾಲ್ವರು ರಾಷ್ಟ್ರೀಯ ಹಾಕಿ ಆಟಗಾರರ ದುರ್ಮರಣ
ಹೊಶಾಂಗಬಾದ್,ಅ 14: ಕಾರು ಅಪಘಾತವೊಂದರಲ್ಲಿ ನಾಲ್ವರು ರಾಷ್ಟ್ರೀಯ ಹಾಕಿ ಆಟಗಾರರು ಮೃತಪಟ್ಟು, ಇತರೆ ಇತರ ಮೂವರು ಗಾಯಗೊಂಡಿರುವ ದಾರುಣ ಘಟನೆ ವರದಿಯಾಗಿದೆ. ಧ್ಯಾನ್ಚಂದ್ ಟ್ರೋಫಿಗಾಗಿ ನಡೆಯುತ್ತಿರುವ ಹಾಕಿ ಟೂರ್ನಿಯಲ್ಲಿ ಭಾಗವಹಿಸಲು ಹಾಕಿ ಆಟಗಾರರು ಕಾರೊಂದರಲ್ಲಿ ಇಟಾರ್ಸ್ಯಿಂದ ಹೊಶಾಂಗಬಾದ್ಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಾವನ್ನಪ್ಪಿರುವ ಹಾಗೂ ಗಾಯಗೊಂಡವರ ಗುರುತನ್ನು ಇನ್ನಷ್ಟೆ ಪತ್ತೆ ಹಚ್ಚಬೇಕಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 