ಕಾರು ಅಪಘಾತ: ನಾಲ್ವರು ರಾಷ್ಟ್ರೀಯ ಹಾಕಿ ಆಟಗಾರರ ದುರ್ಮರಣ
ಹೊಶಾಂಗಬಾದ್,ಅ 14: ಕಾರು ಅಪಘಾತವೊಂದರಲ್ಲಿ ನಾಲ್ವರು ರಾಷ್ಟ್ರೀಯ ಹಾಕಿ ಆಟಗಾರರು ಮೃತಪಟ್ಟು, ಇತರೆ ಇತರ ಮೂವರು ಗಾಯಗೊಂಡಿರುವ ದಾರುಣ ಘಟನೆ ವರದಿಯಾಗಿದೆ. ಧ್ಯಾನ್ಚಂದ್ ಟ್ರೋಫಿಗಾಗಿ ನಡೆಯುತ್ತಿರುವ ಹಾಕಿ ಟೂರ್ನಿಯಲ್ಲಿ ಭಾಗವಹಿಸಲು ಹಾಕಿ ಆಟಗಾರರು ಕಾರೊಂದರಲ್ಲಿ ಇಟಾರ್ಸ್ಯಿಂದ ಹೊಶಾಂಗಬಾದ್ಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಾವನ್ನಪ್ಪಿರುವ ಹಾಗೂ ಗಾಯಗೊಂಡವರ ಗುರುತನ್ನು ಇನ್ನಷ್ಟೆ ಪತ್ತೆ ಹಚ್ಚಬೇಕಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 