ಘಟಪ್ರಭಾ ನದಿಗೆ ಕಾರು ಬಿದ್ದು : ಓರ್ವ ಸಾವು
Car falls into Ghataprabha river: one dead
ಘಟಪ್ರಭಾ ನದಿಗೆ ಕಾರು ಬಿದ್ದು : ಓರ್ವ ಸಾವು
ಬೆಳಗಾವಿ 01: ಸಂಚರಿಸುತ್ತಿದ್ದ ಕಾರೊಂದು ಘಟಪ್ರಭಾ ನದಿ ನೀರಿಗೆ ಉರಳಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹುಕ್ಕೇರಿ ತಾಲೂಕಿನ ಬೆನಕೊಳಿ ಗ್ರಾಮದ ಬಳಿ ನಡೆದಿದೆ.
ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ಕಿರಣ ಎನ್ನುವ ವ್ಯಕ್ತಿಯು ಈ ಘಟನೆಯಲ್ಲಿ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ. ಈತ ತನ್ನ ಮಾರುತಿ ಇಕ್ಕೊ ವಾಹನದಲ್ಲಿ ಸಂಚರಿಸುತ್ತಿದ್ದಾಗ ಕಾರು ಘಟಪ್ರಭಾ ನದಿಗೆ ಉರುಳಿಬಿದ್ದಿದೆ. ಯಮಕನಮರಡಿ ಕಡೆಯಿಂದ ಬೆಳಗಾವಿ ಕಡೆಗೆ ಕಾರು ಸಂಚರಿಸುತ್ತಿದ್ದಾಗ ಕಾರು ನದಿ ನೀರಿಗೆ ಬಿದ್ದಿದೆ.
ಕಾರಿನಲ್ಲಿಯೇ ಕಿರಣ ಈತ ಸಿಲುಕಿಕೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಕಾರು ಮಂಗಳವಾರ ಸಂಜೆ ಅಥವಾ ರಾತ್ರಿ ಬಿದ್ದಿರಬಹುದು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸುತ್ತಿದ್ದಾರೆ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 