ಬೀದರ್ನಲ್ಲಿ ವೀಸಾ ನಿಯಮ ಉಲ್ಲಂಘಿಸಿದ ಕಿರ್ಗಿಸ್ತಾನ್ನ ಎಂಟು ಪ್ರಜೆಗಳ ವಿರುದ್ಧ ಪ್ರಕರಣ ದಾಖಲು
ಬೀದರ್, ಏಪ್ರಿಲ್ 7, ವೀಸಾ ನಿಯಮಗಳ ಉಲ್ಲಂಘನೆ ಮತ್ತು ಜಿಲ್ಲೆಯಲ್ಲಿ ಇಸ್ಲಾಮಿಕ್ ಮಿಷನರಿ ಚಟುವಟಿಕೆಗಳಲ್ಲಿ ತೊಡಗಿದ್ದ ಎಂಟು ಕಿರ್ಗಿಸ್ತಾನ್ ಪ್ರಜೆಗಳ ವಿರುದ್ಧ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ. ಕೊವಿದ್ -19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕ್ವಾರಂಟೈನ್(ಸಂಪರ್ಕತಡೆ)ನಲ್ಲಿ ಇರಿಸಲಾಗಿದ್ದ ಎಂಟು ಕಿರ್ಗಿಸ್ತಾನ್ ಪ್ರಜೆಗಳ ವಿರುದ್ಧ ವೀಸಾ ನಿಯಮಗಳ ಉಲ್ಲಂಘನೆ ಮತ್ತು ಜಿಲ್ಲೆಯಲ್ಲಿ ಇಸ್ಲಾಮಿಕ್ ಮಿಷನರಿ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ ಎಲ್ ನಾಗೇಶ್ ತಿಳಿಸಿದ್ದಾರೆ.
ಮಾರ್ಚ್ 10 ರಂದು ತಾಷ್ಮಾತೊವ್ ಟಿಲೆಕ್ ಮತ್ತು ಅನರಲೀವ್ ಬೆಗಾಲಿ ಸೇರಿದಂತೆ ಎಂಟು ಕಿರ್ಗಿಸ್ತಾನ್ ಪ್ರಜೆಗಳು ಇಲ್ಲಿಗೆ ಬಂದು ನಗರದ ಮಸೀದಿಗಳಲ್ಲಿ ಕೆಲವು ದಿನಗಳ ಕಾಲ ತಂಗಿದ್ದರು. ಇಸ್ಲಾಮಿಕ್ ಮಿಷನರಿ ಚಟುವಟಿಕೆಗಳನ್ನು ನಡೆಸಲು ಇವರು ಒಡಿಶಾದ ಕೆಲ ಜನರ ಸಹಾಯವನ್ನು ಪಡೆದಿದ್ದರು ಎಂದು ನಾಗೇಶ್ ತಿಳಿಸಿದ್ದಾರೆ. ಈ ವಿದೇಶಿಯರನ್ನು ರತ್ಕಲ್ಪುರ ಮಸೀದಿ ಬಳಿಯಿರುವ ಅತಿಥಿ ಗೃಹದಲ್ಲಿ ಸಂಪರ್ಕತಡೆಯಲ್ಲಿರಿಸಲಾಗಿದೆ ಎಂದು ನಾಗೇಶ್ ಹೇಳಿದ್ದಾರೆ.ಕಿರ್ಗಿಸ್ತಾನ್ ರಾಯಭಾರ ಕಚೇರಿಗೆ ಅವರ ಚಟುವಟಿಕೆಗಳು ಮತ್ತು ಅವಧಿ ಮೀರಿ ದೇಶದಲ್ಲಿ ತಂಗಿರುವ ಬಗ್ಗೆ ಮಾಹಿತಿ ನೀಡಲಾಗುವುದು. ಈ ಕುರಿತ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 