ಮನೆಯ ಕಿಟಕಿ ಮುರಿದು ನಗದು,ಚಿನ್ನಾಭರಣ ಕಳ್ಳತನ
Cash, jewellery stolen after house window broken
ಹೂವಿನಹಡಗಲಿ 21 : ದರೋಡೆಕೊರರು ಮನೆಯ ಹಿಂಭಾಗಲದ ಕಿಟಕಿ ಮುರಿದು ನಗದು, ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಪಟ್ಟಣದ ಸೋಗಿ ರಸ್ತೆಯ 9ನೇ ವಾರ್ಡ್ ನಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಪಟ್ಟಣದ ಓಷಧಿ ಮಾರಾಟಗಾರ ಪ್ರತಿನಿಧಿ ಅಜಮಾತುಲ್ಲಾ ಎಂಬುವವರು ಮನೆ ಬೀಗ ಹಾಕಿಕೊಂಡು ಪಟ್ಟಣದ ಸಹೋದರಿ ಮನೆಗೆ ಹೋಗಿದ್ದ ವೇಳೆ ರಾತ್ರಿ ಕಳ್ಳರು ಮನೆಯ ಹಿಂಭಾಗದ ಕಿಟಕಿಯ 4 ಕಬ್ಬಿಣ ಸರಳನ್ನು ಕೊರೆದು ಮನೆ ಒಳಗಡೆ ಹೋಗಿ ಕಳ್ಳತನ ಮಾಡಿದ್ದಾರೆ. ಮನೆಯಲ್ಲಿದ್ದ 15 ತೊಲೆ ಬಂಗಾರ, ಜತೆಗೆ ಬೆಳ್ಳಿ , ? 65 ಸಾವಿರ ನಗದು ಹಣವನ್ನು ದೋಚಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ ದೀಪಿಕ್ ಆರ್. ಭೂಸರೆಡ್ಡಿ, ಪಿಎಸ್ ಐ ಮಣಿಕಂಠ ಮತ್ತುಬೆರಳಚ್ಚು ತಜ್ಞರು, ಶ್ವಾನ ತಪಾಸಣಾ ದಳ ಭೇಟಿ ನೀಡಿ ತಪಾಸಣೆ ನಡೆಸಿದರು. ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 