ಶಾಂತಿ ರೀತಿಯಿಂದ ಮೊಹರಂ ಆಚರಿಸಿ: ಸಿಪಿಐ ಮಠಪತಿ
Celebrate Muharram peacefully: CPI Mathapati
ಯರಗಟ್ಟಿ 20 : ಹಿಂದೂ ಮುಸ್ಲಿಂ ಬಾಂಧವರ ಭಾವೈಕ್ಯ ಸಾರುವ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿ ರೀತಿಯಿಂದ ಆಚರಿಸ ಬೇಕು ಎಂದು ಸಿಪಿಐ ಐಎಂ. ಮಠಪತಿ ಹೇಳಿದರು. ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆ ಉದ್ದೇಶಿಸಿ ಮಾತನಾ ಡಿದರು. ‘ಮಾನವ ಜಾತಿ ಎಂಬುದು ಒಂದೇ. ಹಿಂದೂ ಆಗಲಿ, ಮುಸ್ಲಿಂ ಆಗಲಿ ಎಲ್ಲರ ಮೈಯಲ್ಲಿ ಹರಿಯುತ್ತಿರುವುದು ಒಂದೇ ರಕ್ತ. ಅದಕ್ಕಾಗಿಯೇ ಮಾನವ ಧರ್ಮಕ್ಕೆ ಜಯವಾಗಲಿ. ಧರ್ಮದಿಂದಲೇ ವಿಶ್ವಕ್ಕೆ ಎಂಬ ಸಂದೇಶ ಸಾರಿದ್ದಾರೆ. ಅಂತ ಮಹಾತ್ಮರು ನೀಡಿದ ಸಂದೇಶವನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.‘ಮೊಹರಂ ಹಬ್ಬದಲ್ಲಿ ದೇವರನ್ನು ಪ್ರತಿಷ್ಠಾಪಿಸುವ ಪ್ರತಿಗಲ್ಲಿಯ ಮುಖಂಡರು ಹೆಚ್ಚಿನ ಜಾಗೃತಿಯನ್ನು ವಹಿಸಬೇಕು. ಯುವಕರನ್ನು ಗುಂಪು ಗುಂಪಾಗಿ ಸೇರಲು ಬಿಡಬಾರದು.
ಯುವಕರ ಕಡೆ ಹೆಚ್ಚು ಗಮನ ಕೊಡಬೇಕು. ಯಾವುದೇ ಅಹಿತಕರ ಘಟನೆಗಳು ನಡೆದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು. ಈ ಸಮಯದಲ್ಲಿ ಹಿಂದೂ ಮುಸ್ಲಿಂ ಸಮಾಜದ ಹಿರಿಯರು ಮುಖಂಡರು ಇದ್ದರು.ಈ ವೇಳೆ ಇಮಾಮಸಾಬ ಹುಸೇನನಾಯ್ಕರ, ವಿಠ್ಠಲಗೌಡ ದೇವರಡ್ಡಿ, ಭಾಸ್ಕರ ಹಿರೇಮೆತ್ರಿ, ಮಲಿಕಸಾಬ ಬಾಗವಾನ, ಮುದಕಪ್ಪ ತಡಸಲೂರ, ಮದಾರಸಾಬ ಚಾಂಖಾನ್ನವರ, ಫಿರೋಜ ಖಾದ್ರಿ, ರಫೀಕ ಡಿಕೆ, ಅಮೀರ ದೇವಡಿ, ದೂದನಾನಾ ಪತ್ತುನಾಯ್ಕರ, ಶಿವಾನಂದ ಬಳಿಗಾರ, ಕೆ.ಎಫ್. ನಾದಾಫ, ಸಲಿಂಬೇಗ ಜಮಾದಾರ, ನಜೀರ ನದಾಫ, ಪಿಎಸೈ ಎಲ್.ಬಿ ಮಾಳಿ, ಪ್ರೊಫೆಸರ್ ಪಿಎಸ್ಐ ಮಾರುತಿ ಲಮಾಣಿ, ಎಎಸ್ಐ ಬಿ.ಎಸ್ ರಂಗಣ್ಣವರ, ಪಿಸಿಗಳಾದ ಎಂ. ಬಿ. ಸಣ್ಣನಾಯ್ಕ, ರಮೇಶ ತೇಲಿ, ವಾಯ್. ಎನ್. ಮೇಟ್ಯಾಲ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹಿರಿಯರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 