ಬೆಟಗೇರಿ: ಸಂಭ್ರಮದ ಕೂರಿಗೆ ಪೂಜೆ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಟಗೇರಿ 16: ಪ್ರಸಕ್ತ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಆರಂಭದ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಂಪ್ರದಾಯದಂತೆ ಹಿರಿಯರು, ರೈತರು ಸಹೋಗದಲ್ಲಿ ಶನಿವಾರ ಜೂ.15 ರಂದು ಕೂರಿಗೆ ಪೂಜೆ ಕಾರ್ಯಕ್ರಮ ಸಡಗರದಿಂದ ನಡೆಯಿತು.
ಬೆಳಗ್ಗೆ 10 ಗಂಟೆಗೆ ಪುರದೇವರ ದೇವಾಲಯಗಳಲ್ಲಿ ಪೂಜೆ ಪುನಸ್ಕಾರ, ನೈವೆದ್ಯ ಸಮಪರ್ಿಸಿ ಇಲ್ಲಿಯ ಹಿರಿಯರು, ರೈತರು ಈ ವರ್ಷ ಮುಂಗಾರು, ಹಿಂಗಾರೂ ಉತ್ತಮ ಮಳೆಯಾಗಲಿ ಬೆಳೆ ಹುಲಸಾಗಿ ಬೆಳೆಯಲಿ ಎಂದು ಮೇಘರಾಜನಿಗೆ ಹಾಗೂ ದೇವರಲ್ಲಿ ಮೊರೆ ಹೋಗಿ ಬೇಡಿಕೊಂಡರು.
ಗ್ರಾಮದ ಎಲ್ಲ ರೈತರ, ಹಿರಿಯರ ಒಟ್ಟಿಗೆ ಸೇರಿ ಊರಿನ ಧರೆಪ್ಪ ದೊಡ್ಡೊದ್ದಪ್ಪ ಚಂದರಗಿ ಅವರ ಗದ್ದೆಯೊಂದರಲ್ಲಿ ಕೂರಿಗೆ ಪೂಜೆ ಕಾರ್ಯಕ್ರಮ ನೆರವೇರಿಸಿದ ಬಳಿಕ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗೆ ಚಾಲನೆ ನೀಡಲಾಯಿತು.
ರಾಮಣ್ಣ ಬಳಿಗಾರ, ಮುತ್ತೆಪ್ಪ ವಡೇರ, ಲಕ್ಷ್ಮಣ ಸೋಮನಗೌಡರ, ಎಮ್.ಐ.ನೀಲಣ್ಣವರ, ಈರಯ್ಯ ಹಿರೇಮಠ, ಲಕ್ಷ್ಮಣ ಚಂದರಗಿ, ವಿಠಲ ಚಂದರಗಿ, ಬಸವಂತ ಚಂದರಗಿ ಸೇರಿದಂತೆ ಯುವಕರು, ರೈತರು, ಮಹಿಳೆಯರು, ವಯೋವೃದ್ಧರು, ಗ್ರಾಮಸ್ಥರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 