ಸಂತ ಕವಿ ಸರ್ವಜ್ಞ ಜಯಂತಿಯನ್ನು ಆಚರಣೆ
Celebration of the Jayanti of the saint poet Sarvajna
ಲೋಕದರ್ಶನ ವರದಿ
ವಿಜಯಪುರ 20: ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ದಿ.20 ಶುಕ್ರವಾರದಂದು ಸಂತ ಕವಿ ಸರ್ವಜ್ಞ ಜಯಂತಿಯನ್ನು ಆಚರಣೆ ಮಾಡಲಾಯಿತು.
ಸಂಸ್ಥೆಯ ಅಧ್ಯಕ್ಷ ಎಸ್.ಎಂ.ಸಜ್ಜನ ಅವರು ಕನ್ನಡ ಸಾಹಿತ್ಯದ ಇತಿಹಾಸದಲ್ಲಿ ಮಹತ್ವದ ಸ್ಥಾನ ಪಡೆದಿರುವ ಸರ್ವಜ್ಞರು ತ್ರಿಪದಿ ಕಾವ್ಯದ ಮೂಲಕ ಜನಪ್ರಿಯರಾದ ಕವಿ-ತತ್ತ್ವಜ್ಞರು ಅವರು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸರಳ, ಸುಗಮ ಮತ್ತು ತತ್ವಪೂರ್ಣವಾದ ತ್ರಿಪದಿಗಳನ್ನು ರಚಿಸಿದರು. ಸರ್ವಜ್ಞರು ತಮ್ಮ ಕಾಲದ ಸಾಮಾಜಿಕ, ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಬದುಕಿನ ಎಲ್ಲ ವಿಷಯಗಳನ್ನೂ ಸ್ಪರ್ಶಿಸಿದ್ದಾರೆ. ಈ ಕಾರಣದಿಂದ ಅವರನ್ನು ಜನಕವಿ ಎಂದೂ ಕರೆಯಲಾಗುತ್ತದೆ.ಸರ್ವಜ್ಞ ನಡೆದು ಬಂದ ದಾರಿ ಅವರ ಆದರ್ಶಗಳನ್ನ ಮೈಗೂಡಿಸಿಕೊಂಡು ಸಾಗಬೇಕಾಗಿದೆ ಎಂದು ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರು ಬಿ.ಜಿ.ಸಜ್ಜನ, ಆರ್.ಎಸ್.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣಧೋಳಿ, ಸಿಬಿಎಸ್ಇ ಪ್ರಾಚಾರ್ಯ ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಟಿ.ವ್ಹಿ ಶೆಟ್ಟಿ, ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 