ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ Celebration of the birth anniversary of Nadaprabhu Kempegowda

ತಾಳಿಕೋಟಿ 27: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಾಡಪ್ರಭು ಕೆಂಪೇಗೌಡರ 517ನೇ ಜಯಂತೋತ್ಸವವನ್ನು ಶನಿವಾರ ಆಚರಿಸಲಾಯಿತು.  ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರು ಅವರು ಮಾತನಾಡಿ ಬೆಂಗಳೂರು ನಗರ ನಿರ್ಮಾಣದಲ್ಲಿ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ ಅವರ ದೂರ ದೃಷ್ಟಿ ಆಡಳಿತ ಹಾಗೂ ಬದುಕಿನ ಆದರ್ಶಗಳು ಯುವ ನಗರ ವಾಸಿಗಳಿಗೆ ಮಾದರಿಯಾಗಿದೆ ಎಂದರು.  ಮುಖ್ಯ ಗುರುಗಳಾದ ಸಂತೋಷ ಪವಾರ, ಸರ್ವ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.