ಈರುಳ್ಳಿ ರಫ್ತು ನಿಷೇಧಿಸುವಲ್ಲಿ ಕೇಂದ್ರವು ಎಡವಿದೆ: ಎಸ್ಎಸ್ಎಸ್ನ ಶೆಟ್ಟಿ
ಕೊಲ್ಹಾಪುರ 29: ಎಲ್ಲಾ ವಿಧದ ಈರುಳ್ಳಿ
ರಫ್ತು ಮಾಡುವು ನಿಷೇಧಿಸುವ ಮೂಲಕ ಕೇಂದ್ರ ಸರ್ಕಾರವು ಎಡವಿದೆ ಎಂದು ಸ್ವಾಭಿಮಾನಿ ಶೆಟ್ಕರಿ ಸಂಘಸ್ಥಾನದ
(ಎಸ್ಎಸ್ಎಸ್) ರಾಷ್ಟ್ರೀಯ ಅಧ್ಯಕ್ಷ ಮತ್ತು ಹಿರಿಯ ಶೆಟ್ಕರಿ ಮುಖಂಡ, ಮಾಜಿ ಸಂಸದ ರಾಜುಶೆಟ್ಟಿ
ಭಾನುವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ಈರುಳ್ಳಿಯ ಅಂತಾರಾಷ್ಟ್ರೀಯ
ಬೆಲೆಗಳು ಹೆಚ್ಚಾಗಿದೆ ಮತ್ತು ದೇಶೀಯ ಮಾರುಕಟ್ಟೆಯಲ್ಲಿಯೂ ಸಹ ಬೆಲೆ ಹೆಚ್ಚಾಗಿದೆ, ತರಕಾರಿ ರಫ್ತಿಗೆ
ನಿಷೇಧ ಹೇರುವ ಮೂಲಕ ಸರ್ಕಾರವು ತಪ್ಪೆಸಗಿದೆ" ಎಂದು ಹೇಳಿದರು.
ಮುಂದಿನ ತಿಂಗಳು ಬರಲಿರುವ 'ಖಾರಿಫ್' ಬೆಳೆ ಪರಿಗಣಿಸಿ ಈರುಳ್ಳಿ
ರಫ್ತು ನಿಷೇಧಿಸುವ ಈ ನಿರ್ಧಾರವು ಈರುಳ್ಳಿ ಬೆಳೆಗಾರರಿಗೆ ತೀವ್ರ ಪರಿಣಾಮ ಬೀರುತ್ತದೆ ಎಂದು ಶೆಟ್ಟಿ
ಅಭಿಪ್ರಾಯಪಟ್ಟರು.
ಸರ್ಕಾರದ ನಿಷೇಧದ ನಿರ್ಧಾರದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ
ಅವರು, ಸರ್ಕಾರವು ರೈತರ ಆರ್ಥಿಕ ಹಿತಾಸಕ್ತಿಗೆ ಒಳಪಡದಂತಹ ನಿರ್ಧಾರವನ್ನು ಏಕೆ ತೆಗೆದುಕೊಂಡಿತು ಎಂದು
ಪ್ರಶ್ನಿಸಿದರು.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್
ಮತ್ತು ಇತರ ಸಚಿವರು ಭಾನುವಾರ ತೆರೆದ ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಈರುಳ್ಳಿಯ ಬೆಲೆಯನ್ನು ನಿಯಂತ್ರಣಕ್ಕೆ
ತರಲು ತಕ್ಷಣವೇ ಜಾರಿಗೆ ಬರುವಂತೆ ಎಲ್ಲಾ ಬಗೆಯ ಈರುಳ್ಳಿಗಳನ್ನು ರಫ್ತು ಮಾಡುವುದನ್ನು ನಿಷೇಧಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 