ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಕಡಿತ ವರದಿ: ಸತ್ಯಕ್ಕೆ ದೂರ ಸ್ಪಷ್ಟಣೆ
ನವದೆಹಲಿ,
ಏ 19,ಕರೋನ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್
ಮುಂದುವರಿದಿದ್ದು, ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವೇತನ(ಪಿಂಚಣಿ)ಯನ್ನು
ಕಡಿತಗೊಳಿಸಲಾಗುತ್ತಿದೆ ಎಂಬ ವರದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಕೇಂದ್ರ
ಹಣಕಾಸು ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ.
ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಕಡಿತಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಸಚಿವಾಲಯ ಈ ಸ್ಪಷ್ಟನೆ ನೀಡಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳ ನಿವೃತ್ತಿ ವೇತನದಲ್ಲಿ ಶೇ.20ರಷ್ಟು ಸಂಬಳವನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ ನಿವೃತ್ತ ಉದ್ಯೋಗಿಗಳ ಪಿಂಚಣಿ ಕಡಿತ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ನಮ್ಮ ಮುಂದೆ ಇಲ್ಲ. ಎಂದೂ ಸಚಿವಾಲಯ ಟ್ವೀಟ್ ನಲ್ಲಿ ಸ್ಪಷ್ಟಪಡಿಸಿದೆ. ಹಣಕಾಸು ಸಚಿವಾಲಯದ ಟ್ವೀಟ್ ಅನ್ನು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡಲೇ ಶೇರ್ ಮಾಡಿದ್ದಾರೆ. ಕರೋನ ಹಿನ್ನೆಲೆಯಲ್ಲಿ ಘೋಷಿಸಿರುವ ಲಾಕ್ ಡೌನ್ ನಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ನಿವೃತ್ತಿ ವೇತನ ನಿಲ್ಲಿಸುತ್ತಾರೆ, ಶೇ.20ರಷ್ಟು ಕಡಿತಗೊಳಿಸುತ್ತಾರೆ ಎಂಬ ಸುದ್ದಿ ಹಬ್ಬಿರುವುದರಿಂದ ನಿವೃತ್ತ ನೌಕರರು ಕಂಗಾಲಾಗಿದ್ದರು.
ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಕಡಿತಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಸಚಿವಾಲಯ ಈ ಸ್ಪಷ್ಟನೆ ನೀಡಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳ ನಿವೃತ್ತಿ ವೇತನದಲ್ಲಿ ಶೇ.20ರಷ್ಟು ಸಂಬಳವನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ ನಿವೃತ್ತ ಉದ್ಯೋಗಿಗಳ ಪಿಂಚಣಿ ಕಡಿತ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ನಮ್ಮ ಮುಂದೆ ಇಲ್ಲ. ಎಂದೂ ಸಚಿವಾಲಯ ಟ್ವೀಟ್ ನಲ್ಲಿ ಸ್ಪಷ್ಟಪಡಿಸಿದೆ. ಹಣಕಾಸು ಸಚಿವಾಲಯದ ಟ್ವೀಟ್ ಅನ್ನು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡಲೇ ಶೇರ್ ಮಾಡಿದ್ದಾರೆ. ಕರೋನ ಹಿನ್ನೆಲೆಯಲ್ಲಿ ಘೋಷಿಸಿರುವ ಲಾಕ್ ಡೌನ್ ನಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ನಿವೃತ್ತಿ ವೇತನ ನಿಲ್ಲಿಸುತ್ತಾರೆ, ಶೇ.20ರಷ್ಟು ಕಡಿತಗೊಳಿಸುತ್ತಾರೆ ಎಂಬ ಸುದ್ದಿ ಹಬ್ಬಿರುವುದರಿಂದ ನಿವೃತ್ತ ನೌಕರರು ಕಂಗಾಲಾಗಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 