ಚಂದ್ರಶೇಖರಗೌಡ ನಾಡಗೌಡ್ರ ನಿಧನ

ಬ್ಯಾಡಗಿ 11: ಪಟ್ಟಣದ ವಿದ್ಯಾನಗರದ ನಿವಾಸಿ ಗುಡ್ಡದಮಲ್ಲಾಪುರದ ಗುರುಮೂಕೇಶ್ವರ ಪ್ರೌಢಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರಗೌಡ ಬಸನಗೌಡ ನಾಡಗೌಡ್ರ (55) ಇವರು ಅನಾರೋಗ್ಯದ ಕಾರಣ ಜ.10 ರಂದು ಬುಧವಾರ ರಾತ್ರಿ ನಿಧನರಾಗಿದ್ದಾರೆ. 

 ಮೃತರು ಪತ್ನಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದು, ಅಂತ್ಯಕ್ರಿಯೆ ಜ.11 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಪಟ್ಟಣದ ವೀರಶೈವ ಮುಕ್ತಿಧಾಮದಲ್ಲಿ ನೆರವೇರಿಸುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. 

ಸಂತಾಪ: ಚಂದ್ರಶೇಖರಗೌಡ ನಾಡಗೌಡ್ರ ಅವರ ನಿಧನಕ್ಕೆ ಗುಡ್ಡದಮಲ್ಲಾಪುರ ಮೂಕಪ್ಪಶ್ರೀಗಳು ಸೇರಿದಂತೆ ಸಂಸದ ಶಿವಕುಮಾರ ಉದಾಸಿ, ಶಾಸಕ ಬಸವರಾಜ ಶಿವಣ್ಣನವರ, ಮಾಜಿ ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ, ಸುರೇಶಗೌಡ ಪಾಟೀಲ, ಮುಖಂಡ ಎಸ್‌.ಆರ್‌.ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಜಿ.ಕೋಟಿ, ಹಾವೇರಿ ಜಿಲ್ಲಾ ಅಮೇಚೂರ ಕಬಡ್ಡಿ ಅಸೋಸಿಯೇಶನ್ ಪದಾಧಿಕಾರಿಗಳು, ನ್ಯಾಷನಲ್ ಯುಥ್ ಕ್ಲಬ್ ಸದಸ್ಯರು, ಗುರುಮೂಕೇಶ್ವರ ಪ್ರೌಢಶಾಲೆಯ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.