ಚಂದ್ರಯಾನ್ -2 ಚಂದ್ರನ ಕಕ್ಷೆಗೆ ಸೇರ್ಪಡೆ
ಚೆನ್ನೈ, ಆಗಸ್ಟ್ 20 ಶ್ರೀಹರಿಕೋಟದ ಎಸ್ಎಚ್ಎಆರ್ ಶ್ರೇಣಿಯಿಂದ ಜುಲೈ 22ರಂದು ಉಡಾವಣೆಗೊಂಡ 'ಚಂದ್ರಯಾನ್ -2' ಬಾಹ್ಯಾಕಾಶ ನೌಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಸೆಪ್ಟೆಂಬರ್ ಏಳರಂದು ಇಳಿಯಲು, ಇಂದು ಚಂದ್ರನ ಕಕ್ಷೆಗೆ ಪ್ರವೇಶಿಸಿದ್ದು, ಈ ಮೂಲಕ ಭಾರತೀಯ ಬಾಹ್ಯಾಕಾಶ ಸಂಸ್ಥೆ ಮಂಗಳವಾರ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಚಂದ್ರ ಕಕ್ಷೆ ಒಳಸೇರುವಿಕೆ (ಎಲ್ಒಐ) ಕಾರ್ಯಾಚರಣೆ ಇಂದು ಬೆಳಗ್ಗೆ 9.02ಕ್ಕೆ ಯಶಸ್ವಿಯಾಗಿ ಯೋಜನೆಯಂತೆ ಬೋರ್ಡ್ ಪೂರ್ಣಗೊಂಡಿದೆ ಎಂದು ಇಸ್ರೋ ತಿಳಿಸಿದೆ. ಜುಲೈ 22ರಂದು ಶ್ರೀಹರಿಕೋಟದ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ್-2 ಅನ್ನು ಉಡಾವಣೆ ಮಾಡಲಾಗಿತ್ತು, 13 ದಿನಗಳ ಕಾಲ ಚಂದ್ರನ ಕಕ್ಷೆಯಲ್ಲಿ ಸುತ್ತಲಿರುವ ನೌಕೆಯಿಂದ ಲ್ಯಾಂಡರ್ ಮತ್ತು ರೋವರ್ ಸೆಪ್ಟಂಬರ್ 7 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ. ಚಂದ್ರನ ಪಥವನ್ನು ಯಶಸ್ವಿಯಾಗಿ ಪ್ರವೇಶಿಸಿದ ಚಂದ್ರಯಾನ್ -2 ಆಗಸ್ಟ್ 14ರಂದು ಭೂ ಕಕ್ಷೆಯ ಸಂಪರ್ಕ ಕಡಿದುಕೊಂಡು ಚಂದ್ರನತ್ತ ಮುಖ ಮಾಡಿದೆ. ಪ್ರಜ್ಞಾನ್ ಎಂಬ ರೋವರ್ ಒಳಗೊಂಡಿರುವ ವಿಕ್ರಮ್ ಎಂಬ ಲ್ಯಾಂಡರ್ ಚಂದ್ರಯಾನ ನೌಕೆಯ ಮತ್ತೊಂದು ಆರ್ಬಿಟರ್ ನಿಂದ ಬಿಡುಗಡೆಯಾಗಲಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 