ಗೃಹರಕ್ಷಕದಳದ ದಿವಂಗತ ಉತ್ತಣ್ಣ ಕುಟುಂಬಕ್ಕೆ ಚೆಕ್ ವಿತರಣೆ
Cheque distributed to the family of the late Home Guard Uttanna
ಕಂಪ್ಲಿ:28. ಕುಟುಂಬದ ಜೀವನ ನಿರ್ವಹಣೆಗಾಗಿ ಆರ್ಥಿಕ ಧನಸಹಾಯ ಮಾಡಲಾಗಿದ್ದು, ಇದರ ಸದುಪಯೋಗದಿಂದ ಜೀವನ ಉತ್ತಮವಾಗಿರಲಿ ಎಂದು ಕರ್ನಾಟಕ ಗೃಹ ರಕ್ಷಕದಳದ ಬಳ್ಳಾರಿ ಜಿಲ್ಲಾ ಸಮಾದೀಷ್ಟರಾದ ವೈ.ಶೇಖ್ ಸಾಬ್ ಹೇಳಿದರು.
ಸ್ಥಳೀಯ ಸರ್ಕಾರಿ ಷಾಮಿಯಾಚಂದ್ ಕಾಲೇಜು ಆವರಣದ ಹಿಂಬದಿಯಲ್ಲಿರುವ ಗೃಹ ರಕ್ಷಕದಳದ ಕಛೇರಿಯಲ್ಲಿ ಇತ್ತೀಚೆಗೆ ಗೃಹ ರಕ್ಷಕದಳದ ಸಿಬ್ಬಂದಿ ಕೆ.ಉತ್ತಣ್ಣ ನಿಧನ ಹೊಂದಿದ ಹಿನ್ನಲೆ ಕರ್ನಾಟಕ ಗೃಹ ರಕ್ಷಕದಳದ ಕೇಂದ್ರ ಕಛೇರಿಯಿಂದ ಮಂಜೂರಾದ 15 ಸಾವಿರ ಸಹಾಯಧನದ ಚೆಕ್ ಅನ್ನು ಅವರ ಪತ್ನಿ ಪಾರ್ವತಿ ಇವರಿಗೆ ವಿತರಿಸಿದ ನಂತರ ಮಾತನಾಡಿ, ಕೆ.ಉತ್ತಣ್ಣ ಇವರು ಗೃಹ ರಕ್ಷಕದಳದಲ್ಲಿ ಹಲವು ವರ್ಷ ಕರ್ತವ್ಯದೊಂದಿಗೆ ಸೇವೆ ಸಲ್ಲಿಸಿದ್ದು ಅವಿಸ್ಮರಣೀಯವಾಗಿದೆ. ಈ ಸಹಾಯಧನವನ್ನು ಜೀವನ ನಿರ್ವಹಣೆಗೆ ಬಳಕೆ ಮಾಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಕಂಪ್ಲಿ ಘಟಕಾಧಿಕಾರಿ ಹೊನ್ನೂರವಲಿಸಾಬ್, ನಿಕಟ ಪೂರ್ವ ಘಟಕಾಧಿಕಾರಿ ಹೆಚ್.ಗಿರಿಧರ್, ಲೀಡರ್ಗಳಾದ ಕೆ.ಸುರೇಶ, ಬಿ.ಚಂದ್ರಶೇಖರ, ಕೆ.ಜಗದೀಶ ಸೇರಿದಂತೆ ಗೃಹ ರಕ್ಷಕದಳದವರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 