ಸಮಚಿತ್ತದಿಂದ ತೀಪು ಸ್ವಾಗತಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ
ಬೆಂಗಳೂರು, ನ 9 : ರಾಮಮಂದಿರ ಹಾಗೂ ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀಪು ಹೊರಹೊಮ್ಮಲಿದ್ದು, ಸವೋಚ್ಚ ನ್ಯಾಯಾಲಯ ಪ್ರಕಟಿಸುವ ತೀರ್ಪನ್ನು ಎಲ್ಲರೂ ಸಮಚಿತ್ತದಿಂದ ಸ್ವಾಗತಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿನ ಜನತೆಗೆ ಸಂದೇಶ ನೀಡಿದ್ದಾರೆ. ಪಕ್ಷದ ಮುಖಂಡರೊಂದಿಗೆ ಕೆ.ಆರ್.ಪೇಟೆಯಲ್ಲಿ ನಡೆಯಲಿರುವ ಅಭಿವೃದ್ಧಿ ಕಾರ್ಯಕ್ರಮಗಳಿಗೆ ತೆರಳುವ ಮುನ್ನ ಡಾಲರ್ಸ್ ಕಾಲೋನಿ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯಾದ್ಯಂತ ಸೂಕ್ಷ್ಮ ಪರಿಸ್ಥಿತಿ ಹಿನ್ನೆಲೆಯಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ತೀಪು ಯಾರ ಪರವೇ ಬರಲಿ ಯಾರ ವಿರುದ್ಧವೇ ಬರಲಿ ನ್ಯಾಯಾಲಯದ ತೀರಪ್[ರ್ಪುಗೆ ಗೌರವ ಕೊಡಬೇಕು ಎಂದರು. ಮೇಲ್ಮನೆ ಬಿಜೆಪಿ ಸದಸ್ಯ ರವಿಕುಮಾರ್ ಮಾತನಾಡಿ, ಎಲ್ಲಾ ಪ್ರಮುಖರು ಕ್ಷೇತ್ರದಲ್ಲಿ ಇದ್ದು, ಪರಿಸ್ಥಿತಿಯನ್ನು ಪೂರ್ಣ ಶಾಂತಿಯುತವಾಗಿ ನಿಭಾಯಿಸಬೇಕು. ತೀಪು ಬಂದ ನಂತರ ಪ್ರಧಾನಮಂತ್ರಿಗಳು, ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಷ್ಟ್ರೀಯ ಕಾರ್ಯಾಧ್ಯಕ್ಷರ ಹೇಳಿಕೆಗಳ ನಂತರ ಅದೇ ರೀತಿಯಲ್ಲಿ ನಮ್ಮ ಅಭಿಪ್ರಾಯಗಳು ರೂಪಿತವಾಗಬೇಕು. ಸೂಕ್ಷ್ಮಪ್ರದೇಶಗಳಲ್ಲಿ, ಕಾರ್ಯಾಲಯ ಮತ್ತಿತರ ಕಡೆಗಳಲ್ಲಿ ಎಚ್ಚರ ವಹಿಸಬೇಕು. ಯಾವುದೇ ರೀತಿಯಲ್ಲಿ ಮೆರವಣಿಗೆ ಹಾಗೂ ವಿಜಯೋತ್ಸವಗಳನ್ನು ಮಾಡಬಾರದು. ಸಾಮಾಜಿಕ ಜಾಲತಾಣ ಪ್ರಕಟಣೆಗಳ ಮೇಲೆ ವಿಶೇಷ ಗಮನವಿರಬೇಕು ಎಂದರು. ಸರ್ಕಾರಿ ಅಧಿಕಾರಿಗಳೊಂದಿಗೆ ಸಂಪರ್ಕವಿರಿಸಿಕೊಂಡು ಸಂಪೂರ್ಣ ಶಾಂತಿ ಸುವ್ಯವಸ್ಥೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಸೊರಬ ಕ್ಷೇತ್ರದ ಶಾಸಕ ಕುಮಾರ್ ಎಸ್.ಬಂಗಾರಪ್ಪ, ಕ್ಷೇತ್ರದಲ್ಲಿ ಅಹಿತಕರ ಘಟನೆಗಳು ನಡೆಯಲು ಅವಕಾಶ ನೀಡಬಾರದು. ನ್ಯಾಯಾಲಯದ ತೀರ್ಪುಗೆ ಬೆಲೆ ಗೌರವ ಕೊಟ್ಟು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 