ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಸ ಕಾರ್ಯಕ್ರಮ
Chief Minister Siddaramaiah's tour program
ಬಳ್ಳಾರಿ 14: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಮೇ 16 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ನ ವಿಮಾನ ನಿಲ್ದಾಣದಿಂದ (ವಿಶೇಷ ವಿಮಾನದ ಮೂಲಕ) ಹೊರಟು ಬೆಳಿಗ್ಗೆ 10.50 ಕ್ಕೆ ತೋರಣಗಲ್ನ ಜಿಂದಾಲ್ನ ಏರ್ಸ್ಟ್ರಿಪ್ ಗೆ ಆಗಮಿಸುವರು.
ನಂತರ ಬೆಳಿಗ್ಗೆ 11 ಗಂಟೆಗೆ ತೋರಣಗಲ್ನ ಜಿಂದಾಲ್ ಏರ್ಸ್ಟ್ರಿಪ್ನಿಂದ ರಸ್ತೆಯ ಮೂಲಕ ಹೊರಟು, 11.30 ಗಂಟೆಗೆ ವಿಜಯನಗರ ಜಿಲ್ಲೆಯ ಹೊಸಪೇಟೆಗೆ ತಲುಪಿ ಮೇ 20 ರಂದು ರಾಜ್ಯ ಸರ್ಕಾರವು ಎರಡು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಿರುವ ಸ್ಥಳ ಪರೀಶೀಲನೆ ನಡೆಸುವರು.
ಬಳಿಕ ಮಧ್ಯಾಹ್ನ 01.30 ಗಂಟೆಗೆ ಅಲ್ಲಿಂದ ಹೊರಟು, 02 ಗಂಟೆಗೆ ತೋರಣಗಲ್ನ ಜಿಂದಾಲ್ ಏರ್ಸ್ಟ್ರಿಪ್ಗೆ ಆಗಮಿಸಿ, 02.15 ಕ್ಕೆ ವಿಶೇಷ ವಿಮಾನದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ವಿಶೇಷ ಕಾರ್ಯದರ್ಶಿ ಕೆ.ಚಿರಂಜೀವಿ ಅವರು ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 