ದೇವರಾಜ ಅರಸು ಪುತ್ಥಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಪುಷ್ಪನಮನ
ಬೆಂಗಳೂರು, ಆ 20 ದಿವಂಗತ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ಸಮಾನತೆಯ ಹರಿಕಾರ ದೇವರಾಜ್ ಅರಸು ಅವರ ಜಯಂತಿ ಅಂಗವಾಗಿ ಅವರ ಪುತ್ಥಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಅರಸು ನಾಡು ಕಂಡ ಧೀಮಂತ, ಮೇಧಾವಿ ರಾಜಕಾರಣಿ. ಹಿಂದುಳಿದ ವರ್ಗಗಳ ಪರವಾಗಿ ಕಾಳಜಿ ಹೊಂದಿದ್ದ ಅವರು, ಸಮಾಜಕ್ಕೆ ಮಾಡಿರುವ ಕಾರ್ಯಗಳು ಅಚ್ಚಳಿಯದೆ ಉಳಿದಿವೆ. ಪ್ರಮುಖವಾಗಿ ಭೂ ಸುಧಾರಣಾ ಕಾಯ್ದೆ , ಕರ್ನಾಟಕ ಋಣಮುಕ್ತ ಕಾಯ್ದೆ ತಂದು ಬಡವರ ಪರವಾದ ಯೋಜನೆಗಳನ್ನು ಜಾರಿಗೆ ತಂದು ಜನರಿಗೆ ಅನುಕೂಲ ಮಾಡಿಕೊಟ್ಟಿದ್ದರು. ಅವರು ಈ ನಾಡಿಗೆ ಕೊಟ್ಟಂತಹ ಸೇವೆ, ಜಾರಿಗೆ ತಂದ ಕಾರ್ಯಕ್ರಮ ಯಾರೂ ಮರೆಯಲು ಸಾಧ್ಯವಿಲ್ಲ ಎಂದು ಸ್ಮರಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 