ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿ: ಸಚಿವ ಸಿ.ಟಿ. ರವಿ ನಡೆ ಆಘಾತಕಾರಿ - ಪ್ರಸನ್ನ
ಬೆಂಗಳೂರು, ಜ 8 ಶೃಂಗೇರಿಯಲ್ಲಿ ಶುಕ್ರವಾರದಿಂದ ನಡೆಯಲಿರುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಯದಂತೆ ಮಾಡಲು ಯತ್ನಿಸುತ್ತಿರುವ ರಾಜ್ಯಸರಕಾರದ ನಡೆ ಖಂಡನೀಯ ಎಂದು ಹಿರಿಯ ರಂಗಕರ್ಮಿ ಪ್ರಸನ್ನ ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರ ಜತೆ ಪೋಲೀಸರು ಹಾಗೂ ಶೃಂಗೇರಿ ನಗರಸಭೆ ಅತ್ಯಂತ ವ್ಯವಸ್ಥಿತವಾಗಿ ವಿವಿಧ ರೀತಿಯಲ್ಲಿ ಸಮ್ಮೇಳನಕ್ಕೆ ಅಡೆತಡೆ ಉಂಟು ಮಾಡುತ್ತಿದೆ ಎಂದು ತಿಳಿದು ಆಘಾತವಾಯಿತು ಎಂದಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇದು, ಸಾಂಸ್ಕ್ರತಿಕ ಸ್ವಾಯತ್ತತೆಯ ಮೇಲೆ ಸರಕಾರ ನಡೆಸಿರುವ ನೇರ ಹಲ್ಲೆಯಾಗಿದೆ. ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮನುಬಳಿಗಾರ್ ಸರಕಾರದ ಈ ನಡೆಯನ್ನು ಪ್ರತಿಭಟಿಸಬೇಕು. ಸಂಸ್ಥೆಯ ಸ್ವಾಯತ್ತತೆಯನ್ನು ಸರಕಾರವು ಗೌರವಿಸುವ ತನಕ ಸರಕಾರದ ಸಹಾಯಧನವನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕನ್ನಡ ಜನತೆ ತಾನೇ ಮುಂದೆ ನಿಂತು ಸಮ್ಮೇಳನವನ್ನು ಯಶಸ್ವಿಯಾಗಿಸಲು ಹೊರಟಿರುವ, ಹಣ ಮತ್ತಿತರ ಸಹಾಯ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಒಬ್ಬ ಸಾಮಾನ್ಯ ಸಾಂಸ್ಕ್ರತಿಕ ಕಾರ್ಯಕರ್ತನಾದ ನಾನು ಈ ಕೆಲಸದಲ್ಲಿ ಹೆಮ್ಮೆಯಿಂದ ಕೈಜೋಡಿಸಲು ಬಯಸುತ್ತೇನೆ ಎಂದು ಪ್ರಸನ್ನ ಹೇಳಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 