ಚಿಕ್ಕಪಡಸಲಗಿ: ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
Chikkapadasalagi: Man commits suicide by jumping into Krishna river
ಚಿಕ್ಕಪಡಸಲಗಿ: ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಜಮಖಂಡಿ 07: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ತುಂಬಿ ಹರಿಯುತ್ತಿರುವ ಕೃಷ್ಣಾ ನದಿಗೆ ವ್ಯಕ್ತಿಯೊಬ್ಬನು ಬ್ಯಾರೇಜ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವಿಜಯಪೂರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುನಗಿ ಗ್ರಾಮದ ಇಮಾಮಸಾಬ ಹಾಜಿಸಾಬ ವಾಲಿಕರ (36) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ, ಕಂಪ್ಯೂಟರ್ ಆನ್ಲೈನ್ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು. ಕೃಷ್ಣಾನದಿ ಬ್ಯಾರೇಜ್ ಮೇಲೆ ತನ್ನ ಮೋಟರ್ ಬೈಕ್ ನಿಲಿಸಿದ್ದು. ಮೃತನು ಕೈಗಡ ಸಾಲವನ್ನು ಮಾಡಿಕೊಂಡಿದ್ದ ಎಂದು ತಿಳಿದು ಬಂದಿದ್ದು. ಈ ಬಗ್ಗೆ ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣಾನದಿ ತುಂಬಿ ರಭಸವಾಗಿ ಹರಿಯುತ್ತಿರುವದರಿಂದ ನದಿ ತೀರದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಇಮಾಮಸಾಬ ಹಾಜಿಸಾಬ ವಾಲಿಕರ (36) ನದಿಗೆ ಹಾರಿದ್ದನ್ನು ಗಮನಿಸಿ ಮೀನುಗಾರರ ಸಹಾಯದಿಂದ ಪೊಲೀಸರು ವ್ಯಕ್ತಿಯನ್ನು ರಕ್ಷಣೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ ಎಂದು ಸಾವಳಗಿ ಪಿಎಸ್ಐ ಅಪ್ಪಣ್ಣ ಐಗಳಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸಾವಳಗಿ ಪೋಲಿಸ್ ಠಾಣೆಯ ಪಿಎಸ್ಐ ಅಪ್ಪಣ್ಣ ಐಗಳಿ ಹಾಗೂ ಸಿಬ್ಬಂದಿಗಳಾದ ಸುರೇಶ ಹುಚ್ಚಗೌಡರ, ರಾಜು ಪಡತಾರೆ, ಸದಾಶಿವ ಶೆಟ್ಟನವರ, ಬಸು ಮಾಳಿ ಮತ್ತು ಮೃತನ ಕುಟುಂಬಸ್ಥರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 