ಮಕ್ಕಳ ದಿನಾಚರಣೆ: ಶಿಕ್ಷಕ - ಪೋಷಕರ ಮಹಾಸಭೆ
Children's Day: Teacher-Parent General Assembly
ಸಿಂದಗಿ 12: ಮಕ್ಕಳ ದಿನಾಚರಣೆಯಂದು ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕ - ಪೋಷಕರ ಮಹಾಸಭೆ ಆಯೋಜನೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಯಡ್ರಾಮಿ ಹೇಳಿದರು.
ಸರ್ಕಾರದ ಸುತ್ತೋಲೆಯಂತೆ ನವಂಬರ್ 14.2025 ರ ಮಕ್ಕಳ ದಿನಾಚರಣೆಯಂದು ಸಿಂದಗಿ, ದೇವರಹಿಪ್ಪರಗಿ ಮತ್ತು ಆಲಮೇಲ ತಾಲೂಕಿನ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕ-ಪೋಷಕ ಮಹಾಸಭೆಯನ್ನು ಆಯೋಜಿಸಲಾಗಿದೆ. ಈ ಮಹಾಸಭೆಯನ್ನು ತಾಲೂಕಿನ ಎಲ್ಲಾ ಅನುಷ್ಠಾನಾಧಿಕಾರಿಗಳ, ಸಿ ಆರ್ ಪಿ,ಬಿ ಆರ್ ಪಿ, ಇ ಸಿ ಓ ರವರು ಅತ್ಯಂತ ಅಚ್ಚುಕಟ್ಟಾಗಿ ಆಯೋಜಿಸಿ ಯಶಸ್ವಿಗೊಳಿಸಲು ಗೂಗಲ್ ಮೀಟ್ ಸಭೆಯ ಮೂಲಕ ಸೂಚನೆ ನೀಡಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಿಕ್ಷಕ-ಪೋಷಕ ಮಹಾಸಭೆಯಲ್ಲಿ, ಸಂವಿಧಾನ ಪೀಠಿಕೆಯ ಓದು, ಮಕ್ಕಳ ಕಲಿಕಾ ಪ್ರಗತಿ, ದಾಖಲಾತಿ ಮತ್ತು ಹಾಜರಾತಿ,ಎಸ್ ಎಲ್ ಸಿ ಪರೀಕ್ಷೆಯ ಪೂರ್ವ ಸಿದ್ಧತೆ, ಪರೀಕ್ಷಾ ಭಯ ನಿವಾರಣೆ,ಪಾಠ ಆಧಾರಿತ ಮೌಲ್ಯಮಾಪನದ ವಿಶ್ಲೇಷಣೆ, ಇಲಾಖೆಯ ಪ್ರೋತ್ಸಾಹದಾಯಕ ಯೋಜನೆಗಳು, ಶಾಲೆಯ ಸವಾಂರ್ಗೀಣ ಅಭಿವೃದ್ಧಿಯಲ್ಲಿ ಪೋಷಕರ ಹಾಗೂ ಎಸ ಡಿಎಂಸಿ ಅವರ ಪಾತ್ರ, ಆರ್ ಟಿ ಇ ಕಾಯ್ದೆ, ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣಾ ನೀತಿ, ಠಿಠಠ ಕಾಯ್ದೆ, ಮಧ್ಯಾಹ್ನ ಉಪಹಾರ ಯೋಜನೆಯ ಸಮರ್ಕ ಅನುಷ್ಠಾನ, ಬಾಲ್ಯ ವಿವಾಹ ನಿಷೇಧ, ಬಾಲಕಾರ್ಮಿಕ ಪದ್ಧತಿ ನಿಷೇಧ ನೀತಿ,ವಿಶೇಷ ಚೇತನ ಮಕ್ಕಳಿಗೆ ಇಲಾಖೆಯ ಸೌಲಭ್ಯಗಳು, ಶಾಲೆಯ ಅಭಿವೃದ್ಧಿಯಲ್ಲಿ ಭಾಗಿದಾರರ ಪಾತ್ರ, ಮತ್ತು ಮಕ್ಕಳ ಪ್ರತಿಭೆ ಗುರುತಿಸುವ ವೇದಿಕೆಯಾಗಿ ಪೋಷಕ-ಶಿಕ್ಷಕ ಮಹಾಸತಭೆಯನ್ನು ಅರ್ಥಪೂರ್ಣವಾಗಿ ಬಳಸಿಕೊಳ್ಳಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚಿಸಿದರು. ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನದವರೆಗೆ ವೇಳಾಪಟ್ಟಿಯನುಸಾರ ಈ ಸಭೆಯನ್ನು ಆಯೋಜಿಸುವಂತೆ ಸೂಚಿಸಿದ್ದಾರೆ. ಅಂದು ಶಾಲೆಯಲ್ಲಿ ತಳಿರು-ತೋರಣಗಳಿಂದ ಸಿಂಗರಿಸಿ, ಸಿಹಿ ಊಟ ವಿತರಿಸಿ, ಮಕ್ಕಳ ಕಲಿಕಾ ಪ್ರಗತಿಯನ್ನು ಎಲ್ಲಾ ಪಾಲಕರ ಗಮನಕ್ಕೆ ತರುವಂತೆ ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 