ಮಕ್ಕಳಲ್ಲಿನ ವ್ಯವಹಾರಿಕ ಜ್ಞಾನದ ವೃದ್ಧಿಸಿದ ಮಕ್ಕಳ ಹಳ್ಳಿ ಸಂತೆ
Children's Village Santhe has increased business knowledge among children
ಮಕ್ಕಳಲ್ಲಿನ ವ್ಯವಹಾರಿಕ ಜ್ಞಾನದ ವೃದ್ಧಿಸಿದ ಮಕ್ಕಳ ಹಳ್ಳಿ ಸಂತೆ
ಗುರ್ಲಾಪೂರ 17: ಸಮೀಪದ ಹಳ್ಳೂರ್ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಳ್ಳೂರ್ ಕ್ರಾಸ್, ತೋಟದ ಶಾಲೆಯಲ್ಲಿ ಮಕ್ಕಳಲ್ಲಿನ ವ್ಯವಹಾರಿಕ ಜ್ಞಾನದ ವೃದ್ಧಿಗಾಗಿ ಮಕ್ಕಳ ಹಳ್ಳಿ ಸಂತೆಯನ್ನು ಏರಿ್ಡಸಲಾಗಿತ್ತು. ಹಿರಿಯರಾದ ಬಾಬು ಪಾ ಸಪ್ತಸಾಗರ ಮತ್ತು ಎಸ್ಡಿಎಂಸಿ ಅಧ್ಯಕ್ಷ ಎಸ್ ಬಿ ಗೊರಗುದ್ದಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳ ಪಾಠದ ಜೊತೆಗೆ ಪಠ್ಯೇತರ ಹಾಗೂ ವ್ಯವಹಾರಿಕ ಜ್ಞಾನಕ್ಕೆ ಒತ್ತು ಕೊಡುವುದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಾಧ್ಯ ಎಂದು ಹೇಳಿದರು. ಶಿಕ್ಷಕರು ನಮ್ಮ ಶಾಲೆಯಲ್ಲಿ ಈ ರೀತಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಶಾಲೆಯ ಪ್ರಧಾನ ಗುರು ಬಿ ಪಿ ಪಾಟೀಲ್ ರವರು ಶಿಕ್ಷಣದೊಂದಿಗೆ ನೈಜ ವ್ಯವಹಾರಿಕ ಜ್ಞಾನ ಬೆಳೆಯಲು ಮಕ್ಕಳ ಸಂತೆ ಕಾರ್ಯಕ್ರಮ ಸಹಕಾರಿಯಾಗಿದೆ ಮತ್ತು ಇದು ಮಕ್ಕಳ ವ್ಯಕ್ತಿತ್ವ ವಿಕಾಸನಕ್ಕೆ ಪೂರಕವಾದ ಕಾರ್ಯಕ್ರಮವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳನ್ನು ಎಲ್ಲ ಕ್ಷೇತ್ರದಲ್ಲಿ ಸಜ್ಜುಗೊಳಿಸುವ ಅಗತ್ಯವಿದೆ ಮತ್ತು ಮಕ್ಕಳು ಈ ಕಾರ್ಯಕ್ರಮದಲ್ಲಿ ಅತಿ ಉತ್ಸಾಹದಿಂದ ತೊಡಗಿಕೊಂಡಿದ್ದು ತುಂಬಾ ಸಂತಸ ತಂದಿದೆ ಎಂದರು. ಎಲ್ಲರ ಮನಸೊರೆಗೊಂಡ ಮಕ್ಕಳ ಸಂತೆ ಮಕ್ಕಳಲ್ಲಿನ ಸಂವಹನ ಮತ್ತು ವ್ಯವಹಾರಿಕ ಕೌಶಲ್ಯ ಹೆಚ್ಚಿಸುವ ಉದ್ದೇಶದಿಂದ ಸ್ವ ಅನುಭವ ನೀಡುವ ಈ ಸಂತೆಯು ನೋಡುಗರ ಮನಸ್ಸನ್ನು ಸೆಳೆಯಿತು. ಮಕ್ಕಳು ವಿಶೇಷ ಉಡಿಗೆಗಳೊಂದಿಗೆ ಹೊಲದಲ್ಲಿ ಬೆಳೆದ ವಿವಿಧ ತರಕಾರಿ, ಹಣ್ಣು ಹಂಪಲ, ದಿನಸಿ ಕಾಳುಗಳು, ವಿಶೇಷವಾದ ತಿಂಡಿ ತಿನಿಸುಗಳಾದ, ಬೇಲ್ಪುರಿ, ಬೋಂಡಾ ಬಜ್ಜಿ, ಕಾಫಿ, ಟೀ ಸೇರಿದಂತೆ ಹಲವು ಅಗತ್ಯ ವಸ್ತುಗಳನ್ನು ಮಾರಾಟ ಮಾಡಲಾಯಿತು. ಮಕ್ಕಳು ಸಾರ್ವಜನಿಕರಿಗೆ ಮಾರುತ್ತಿದ್ದ ವಸ್ತುಗಳ ವ್ಯಾಪಾರ ನೈಜ ವ್ಯಾಪಾರಸ್ಥರನ್ನು ನಾಚಿಸುವಂತಿತ್ತು. ಪರಸ್ಪರ ಸ್ವರ್ಧಾ ಮನೋಭಾವದಿಂದ ಮಕ್ಕಳು ನಾವೇ ಹೆಚ್ಚು ವ್ಯಾಪಾರ ಮಾಡಬೇಕು ಎಂಬ ಛಲದಿಂದ ಪೋಷಕರನ್ನು ಕರೆದು ತಮ್ಮ ಸಾಮಗ್ರಿ ಖರೀದಿಸಲು ಒತ್ತಾಯಿಸುತ್ತಿದ್ದರು. ಪಾಲಕರು ಶಿಕ್ಷಕರು ಅತಿ ಉತ್ಸಾಹದಿಂದ ಮಕ್ಕಳು ಸಂತೆಯಲ್ಲಿ ತಂದ ವಸ್ತುಗಳ ಖರೀದಿಯಲ್ಲಿ ಮುಗಿಬಿದ್ದರು. ಸಂತೆಯಲ್ಲಿ ಪಾಲ್ಗೊಂಡ ಪಾಲಕರು ಶಿಕ್ಷಕರು ಮಕ್ಕಳು ಇಡ್ಲಿ ಸಾಂಬಾರ್ ಭೋಜನ ಸವಿದು ಸಂಭ್ರಮಿಸಿದರು. ಈ ವಿಶೇಷ ಹಳ್ಳಿ ಸಂತೆಯಲ್ಲಿ ಶಾಲೆಯ ಎಸ್ಎಂಸಿ ಅಧ್ಯಕ್ಷರು ಸರ್ವ ಸದಸ್ಯರು ಪಾಲಕರು ಪ್ರಧಾನಗಳು ಸಹ ಶಿಕ್ಷಕರು ಮುದ್ದು ವಿದ್ಯಾರ್ಥಿಗಳು ಅದರಲ್ಲಿ ಪಾಲ್ಗೊಂಡು ಸಂತೆಯನ್ನು ಯಶಸ್ವಿಗೊಳಿಸಿದರು.
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ 