ಶಿಕ್ಷಕರು ವಿಷಯಾಧಾರಿತ ಬೋಧನೆ ಮಾಡಿದರೆ ಮಕ್ಕಳ ಕಲಿಕೆ ಅರ್ಥಪೂರ್ಣ: ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ
Children's learning becomes meaningful when teachers adopt subject-based teaching: Abhinava Shantali
ಲೋಕದರ್ಶನ ವರದಿ
ಧಾರವಾಡ 18: ಶಿಕ್ಷಕರು ಪ್ರತಿ ತರಗತಿಯ ಪಠ್ಯಕ್ರಮದ ವಿಷಯಗಳನ್ನು ಸಂಪೂರ್ಣವಾಗಿ ಅರಿತು ಬೋಧಿಸಿದರೆ ಮಕ್ಕಳ ಕಲಿಕೆ ಹೆಚ್ಚು ಅರ್ಥಪೂರ್ಣವಾಗುತ್ತದೆ ಎಂದು ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಅವರು ಶನಿವಾರ ತಮ್ಮ ಶ್ರೀಮಠದ ಸುಶೀಲತಾಯಿ ಹಿರೇಮಠ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಹುಬ್ಬಳ್ಳಿಯ ದೇಶಪಾಂಡೆ ಪ್ರತಿಷ್ಠಾನದ ‘ಅರ್ಲಿ ಸ್ಪಾರ್ಕ’ ಯೋಜನೆಯಡಿ ಖಾಸಗಿ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ಆಯೋಜಿಸಿದ್ದ ಆಂಗ್ಲ ಭಾಷಾ ಬೋಧನೆಯ ಉಚಿತ ಸರಣಿ ತರಬೇತಿ ಶಿಬಿರಗಳನ್ನು ಉದ್ಘಾಟಿಸಿ ಮಾತನಾಡಿದರು. ಶಾಲಾ ತರಗತಿಗಳಲ್ಲಿ ದೇಶದ ಭವಿಷ್ಯ ನಿರ್ಮಾಣವಾಗುತ್ತದೆ. ಶಿಕ್ಷಕರ ನಿಜವಾದ ಯಶಸ್ಸು ವಿದ್ಯಾರ್ಥಿಗಳ ಅಂಕಗಳಲ್ಲಿ ಮಾತ್ರವಲ್ಲ, ಅವರ ವ್ಯಕ್ತಿತ್ವ ಹಾಗೂ ಜೀವನ ಸಾಧನೆಯಲ್ಲಿ ಕಾಣಿಸುತ್ತದೆ ಎಂದು ಸ್ವಾಮೀಜಿ ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಬೇರುಗಂಡಿ ಬೃಹನ್ಮಠದ ಶ್ರೀ ರೇಣುಕ ಮಹಾಂತ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಬೋಧನೆ ಎಂದರೆ ಕೇವಲ ಪಾಠ ಹೇಳುವುದಲ್ಲ; ವಿದ್ಯಾರ್ಥಿಗಳಿಗೆ ಕಲಿಕಾ ವಿಷಯಗಳನ್ನು ಅರ್ಥ ಮಾಡಿಸುವುದು ಮುಖ್ಯ. ಮಕ್ಕಳು ಮುಕ್ತವಾಗಿ ಪ್ರಶ್ನೆ ಕೇಳಿ ಆಸಕ್ತಿಯಿಂದ ಕಲಿಯುವ ವಾತಾವರಣವನ್ನು ಶಿಕ್ಷಕರು ನಿರ್ಮಿಸಬೇಕು ಎಂದು ಹೇಳಿದರು.
ಹವ್ಯಾಸಿ ಪತ್ರಕರ್ತ ಗುರುಮೂರ್ತಿ ಯರಗಂಬಳಿಮಠ ಮಾತನಾಡಿ, ಶಿಕ್ಷಕರು ಸದಾ ವಿದ್ಯಾರ್ಥಿಗಳಂತೆ ಹೊಸ ವಿಷಯಗಳನ್ನು ಕಲಿಯುವ ಮನೋಭಾವ ಬೆಳೆಸಿಕೊಂಡಾಗ ತರಗತಿಗಳಲ್ಲಿ ಪರಿಣಾಮಕಾರಿ ಬೋಧನೆ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳ ಕಲಿಕೆ ಸಾರ್ಥಕವಾಗಲು ಶಿಕ್ಷಕರಿಗೆ ಅಗತ್ಯವಾದ ತರಬೇತಿಗಳನ್ನು ಉಚಿತವಾಗಿ ನೀಡುತ್ತಿರುವ ಹುಬ್ಬಳ್ಳಿಯ ದೇಶಪಾಂಡೆ ಪ್ರತಿಷ್ಠಾನದ ಸೇವೆ ಶ್ಲಾಘನೀಯವಾಗಿದೆ ಎಂದು ಹೇಳಿದರು. ದೇಶಪಾಂಡೆ ಪ್ರತಿಷ್ಠಾನದ ತರಬೇತುದಾರರಾದ ಪುಷ್ಪಲತಾ ಕುರಗೋಡ ಹಾಗೂ ದಾನಮ್ಮ ಕಲರ್ವಾಡ ಅವರು ತರಬೇತಿ ನೀಡಿದರು.
ಶಾಲೆಯ ಮುಖ್ಯಾಧ್ಯಾಪಕಿ ಮಂಜುಳಾ ದೊಡ್ಡಮನಿ, ವಿವಿಧ ವಿಷಯಗಳ ಶಿಕ್ಷಕರಾದ ಟಿ.ಎಂ. ದೇಸಾಯಿ, ಎಂ.ಎನ್. ಆಲದಕಟ್ಟಿ, ಎಂ. ಆಂಜನೇಯ, ವಿನಾಯಕ ಹಿರೇಮಠ, ಲೀಲಾವತಿ ಅಣ್ಣಿಗೇರಿ, ಮಹೇಶ್ವರಿ ಚಿಕ್ಕಮಠ, ವಿಜಯಲಕ್ಷ್ಮೀ ಇದ್ದಿ, ಜ್ಯೋತಿ ವಿಠ್ಠೋಜಿ, ಸರಿತಾ ಸುಣಗಾರ, ಆರತಿ ಹರಿಜನ, ರಕ್ಷಿತಾ ಶಿರಗುಪ್ಪಿ, ಸವಿತಾ ಅಕ್ಕೋಜಿ, ಪವಿತ್ರಾ ಯರಗಂಬಳಿಮಠ ಸೇರಿದಂತೆ ಹಲವರು ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದರು. ಶನಿವಾರ ಶಾಲಾ ಅವಧಿಯ ನಂತರ ಈ ಸರಣಿ ತರಬೇತಿಗಳು ನಡೆಯುತ್ತಿರುವುದು ವಿಶೇಷವಾಗಿದೆ.
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ 