ಮಕ್ಕಳಿಗೆ ಹುಚ್ಚು ನಾಯಿ ಕಡಿದು ಗಾಯ
Children injured by rabid dog
ಮಕ್ಕಳಿಗೆ ಹುಚ್ಚು ನಾಯಿ ಕಡಿದು ಗಾಯ
ಇಂಡಿ 27: ತಾಲೂಕಿನ ತಡವಲಗಾ ಗ್ರಾಮದಲ್ಲಿ ಮೂರು ಮಕ್ಕಳಿಗೆ ಹುಚ್ಚು ನಾಯಿ ಕಚ್ಚಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ ತಡವಲಗಾ ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡಿರುವ ಮಕ್ಕಳಾದ ಮಹ್ಮದ್ ಇಬ್ರಾಹಿಂ ಕಲಬುರ್ಗಿ ( 8) ಅಫ್ಘಾನ್ ಕಸ್ಸಾಬ(12), ಅಜಾನ್ ಕಸ್ಸಾಬ(5) ಸೇರಿದಂತೆ ಹತ್ತಕ್ಕಿಂತ ಹೆಚ್ಚು ಜನರಿಗೂ ಕಚ್ಚಿದೆ. ಗಾಯಗೊಂಡ ಮಕ್ಕಳನ್ನು ತಡವಲಗಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆ ನೀಡಿ ನಂತರ ಮಾತನಾಡಿದ ಇಂಡಿ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಹಾಗೂ ತಡವಲಗಾ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾಕ್ಟರ್ ಕೆ ಎಸ್ ಜಾಧವ ಅವರು ಹುಚ್ಚು ನಾಯಿ ಕಚ್ಚಿ ತಕ್ಷಣ 24 ಗಂಟೆ ಒಳಗಾಗಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕು. ತಾವು ಯಾವುದೇ ರೀತಿಯ ಮೂಢನಂಬಿಕೆಗಳಿಗೆ ಒಳಗಾಗದೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕು. ವೈದ್ಯರು ಹೇಳಿದ ಹಾಗೆ ನಾಲ್ಕು ಬಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕು. ಇತ್ತಿಚಿನ ದಿನಗಳಲ್ಲಿ ಬೀದಿ ನಾಯಿಗಳ ಕಾಟದಿಂದ ತಪ್ಪಿಸಿಕೊಳ್ಳಲು ಮಕ್ಕಳ ಬಗ್ಗೆ ನಿಗಾವಹಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.ಈ ತಡವಲಗಾ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸುಚ್ಚಿತಾ ಆಕಾಶ್ ಡಾ.ಗುರುರಾಜ ಜಾಗೀರದಾರ ಡಾ.ಫಾರೂಕ್ ಹಾಗೂ ಸಿಬಂದಿ ವರ್ಗ ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 