ಮಕ್ಕಳಿಗೆ ಕಲಿಕೆಯ ಆಸಕ್ತಿ ಮೂಡಿಸುವ ಕೆಲಸ ಆಗಬೇಕು
Children should be encouraged to learn.
ಮಕ್ಕಳಿಗೆ ಕಲಿಕೆಯ ಆಸಕ್ತಿ ಮೂಡಿಸುವ ಕೆಲಸ ಆಗಬೇಕು
ಹೂವಿನ ಹಡಗಲಿ 27: ಶಿಕ್ಷಕ ವೃತ್ತಿ ಪವಿತ್ರ. ಕಲಿಕೆಯಲ್ಲಿ ಆಸಕ್ತಿ ಮೂಡಿಸುವ ಕೆಲಸ ಆಗಬೇಕು ಎಂದು ಜೆ ಎಸ್ ಎಸ್ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಎಂ ನೆಪೋಲಿಯನ್ ಹೇಳಿದರು.ಶುಕ್ರವಾರ ಪಟ್ಟಣದ ಸರ್ಕಾರಿ ಅನುದಾನಿತ ತುಂಗಭದ್ರಾ ಪ್ರೌಢಶಾಲೆಯಲ್ಲಿ ಬಿ ಇ ಡಿ ಪ್ರಶಿಕ್ಷಣ ವಿದ್ಯಾರ್ಥಿಗಳ ಬೋಧನಾ ತರಗತಿ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ಬರೀ ಪಠ್ಯ ವಿಷಯಕ್ಕೆ ಸೀಮಿತವಾಗಿದೆ ಸೃಜನಾತ್ಮಕ ಓದು ಬರವಣಿಗೆಯಿಂದ ಬೋಧನೆಯಲ್ಲಿ ಪ್ರೌಢಿಮೆ ಸಾಧಿಸಲು ಸಾಧ್ಯ. ಕನ್ನಡ ಸಾಹಿತ್ಯ ವಿಜ್ಞಾನ ಸಮಾಜ ವಿವಿಧ ವಿಷಯಗಳ ಆಳವಾದ ಅಧ್ಯಯನ ಮಾಡಿ ಎಂದು ತಿಳಿಸಿದರು.ಬಿ ಇ ಡಿ ತರಬೇತಿಯಲ್ಲಿ ಪಡೆದ ಜ್ಞಾನವನ್ನು ಬೋಧನೆಯಲ್ಲಿ ಅಳವಡಿಸಿಕೊಂಡು ಉತ್ತಮ ಶಿಕ್ಷಕರಾಗಿರಿ ಎಂದು ಹೇಳಿದರು.ವಿಜ್ಞಾನ ಶಿಕ್ಷಕಿ ಗೀತಾ ಪಿ ಎಂ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ಆಗಬೇಕು ಎಂದರು.ಮುಖ್ಯ ಗುರು ಸುರೇಶ ಅಂಗಡಿ ಅಧ್ಯಕ್ಷತೆ ವಹಿಸಿದ್ದರು.ಶಿಕ್ಷಕರಾದ ಸ್ವಾಮಿನಾಥ ರಾಮಸ್ವಾಮಿ ಬಸಪ್ಪ ಕೆ ಲಂಬಾಣಿ ಗಿಡ್ಡಾನಾಯ್ಕ್ ಪ್ರತಿಮಾ ಎನ್ ಎಸ್ ರೇಖಾ ಹರೀಶ್, ಸಂತೋಷ್ ಕುಮಾರ್ ಇತರರು ಇದ್ದರು.ಪಾಠ ಬೋಧನೆಗೆ ಅನುಗುಣವಾಗಿ ನೆಡಿಸಿದ ವಿವಿಧ ವಿಷಯಗಳ ಘಟಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ ಪುಸ್ತಕ ಲೇಖನಿ ಬಹುಮಾನ ವಿತರಿಸಲಾಯಿತು.ಬಿ ಇ ಡಿ ಪ್ರಶಿಕ್ಷಣ ವಿದ್ಯಾರ್ಥಿಗಳಾದ ಕೆಂಚಪ್ಪ, ಮಂಜುನಾಥ, ಐಶ್ವರ್ಯ ಹುಲಿಗೆಮ್ಮ, ಪೂಜಾ, ಪ್ರೀತಿ, ರವಿಕುಮಾರ್ ಪೂಜಾರ, ಪುನೀತ್ ಕುಮಾರ್, ಪವಿತ್ರ, ರಾಜೇಶ್ವರಿ,ನಾಗರತ್ನ ತಮ್ಮ ಬೋಧನೆಯ ಅನುಭವ ಹಂಚಿಕೊಂಡರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 