ತಂದೆಯ ಸಾವಿನ ಮಧ್ಯೆಯೂ ಪರೀಕ್ಷೆ ಬರೆದ ಮಕ್ಕಳು
Children wrote exams despite father's death
ತಂದೆಯ ಸಾವಿನ ಮಧ್ಯೆಯೂ ಪರೀಕ್ಷೆ ಬರೆದ ಮಕ್ಕಳು
ರಾಣೆಬೆನ್ನೂರ 08: ತಂದೆಯ ಆಕಸ್ಮಿಕ ಸಾವಿನ ಮಧ್ಯೆಯೂ ಅಣ್ಣ- ತಂಗಿಯರಿಬ್ಬರು ಇತ್ತೀಚೆಗೆ ನಡೆದ ಎಸ್. ಎಸ್. ಎಲ್. ಸಿ, ಪರೀಕ್ಷೆಯ ಹಿಂದಿ ವಿಷಯವನ್ನು ಬರೆದ ಘಟನೆ ನಗರದಲ್ಲಿ ನಡೆದಿದೆ. ತಾಲೂಕಿನ ಪದ್ಮಾವತಿಪುರದ ಹನುಮಂತಪ್ಪ ಗುಡ್ಡಪ್ಪ ಲಮಾಣಿ( 46) ಎಂಬಾತನು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದ್ದಾರೆ. , ಬಿಇಓ ಮತ್ತಿತರರು ಮೃತನ ಮನೆಗೆ ತೆರಳಿ ಮಕ್ಕಳಿಗೆ ಸ್ಥೈರ್ಯ ತುಂಬಿ ಪರೀಕ್ಷೆ ಬರೆಯಲು ಹೇಳಿದರು. ಪರೀಕ್ಷೆಗೆ ಹೋಗಬೇಕೆನ್ನುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಸಂಬಂಧಿಕರು, ಗ್ರಾಮಸ್ಥರು ಮಕ್ಕಳಿಬ್ಬರಿಗೆ ಧೈರ್ಯ ಹೇಳಿ ಪರೀಕ್ಷೆ ಬರೆಯಲು ಮಾನಸಿಕವಾಗಿ ದೈರ್ಯ ತುಂಬಿದರು. ಮಗ ಧನರಾಜ್ ರಾಜೇಶ್ವರಿಯಲ್ಲಿ ಹಾಗೂ ಮಗಳು ರೋಟರಿ ಶಾಲೆಯ ಕೇಂದ್ರದಲ್ಲಿ ಪರೀಕ್ಷೆ ಬರೆದರು. ಇನ್ನೋರ್ವ ಮಗ ಸಂತೋಷ್ ಮೈಸೂರಿನಲ್ಲಿ ಎಂಬಿಎ ಓದುತ್ತಿದ್ದು ಸಂಜೆ ವೇಳೆಗೆ ಮಕ್ಕಳ ಸಮ್ಮುಖದಲ್ಲಿ ಮೃತನ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 