ಕಗ್ಗಲೀಪುರದ ಫಾರ್ಮ್ ಹೌಸ್ನಲ್ಲಿ ಸಂಜೆ ಚಿರಂಜೀವಿ ಸರ್ಜಾ ಅಂತ್ಯಸಂಸ್ಕಾರ; ಹರಿದುಬರುತ್ತಿರುವ ಜನಸಾಗರ
ಬೆಂಗಳೂರು, ಜೂ.8, ನಿನ್ನೆ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ವುಡ್ ಖ್ಯಾತ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ಕನಕಪುರ ರಸ್ತೆಯಲ್ಲಿರುವ ಕಗ್ಗಲೀಪುರದ ಫಾರ್ಮ್ ಹೌಸ್ನಲ್ಲಿ ನಡೆಯಲಿದೆ.ಚಿರಂಜೀವಿ ಸರ್ಜಾ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ತುಮಕೂರಿನ ಜಕ್ಕೇನಹಳ್ಳಿಯಲ್ಲಿ ಸೋಮವಾರ ನೆರವೇರಲಿದೆ, ತಮ್ಮ ಅಜ್ಜಿಯ ಮನೆಯಾದ ಜಕ್ಕೇನ ಹಳ್ಳಿಯಲ್ಲಿ ತಾತ ಶಕ್ತಿ ಪ್ರಸಾದ್ ಅವರ ಸಮಾಧಿ ಪಕ್ಕದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಅವರ ಕುಟುಂಬ ಮೂಲಗಳು ನಿನ್ನೆ ತಿಳಿಸಿತ್ತು. ಆದರೆ ಇದೀಗ ಕನಕಪುರ ರಸ್ತೆಯಲ್ಲಿರುವ ಕಗ್ಗಲೀಪುರದಲ್ಲಿ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.ಅಣ್ಣ ಸದಾ ನನ್ನ ಜೊತೆಗಿರಬೇಕು, ನನ್ನ ಫಾರ್ಮ್ ಹೌಸ್ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗಬೇಕು ಎಂದು ಸಹೋದರ ದೃವ ಸರ್ಜಾ ಒತ್ತಾಯಿಸಿದ ಹಿನ್ನೆಲೆಯಲ್ಲಿ ಕನಕಪುರ ರಸ್ತೆ ಬಳಿಯಿ ನೆಲಗುಳಿ ಗ್ರಾಮದಲ್ಲಿ ತಮ್ಮ ಧ್ರುವ ಸರ್ಜಾರ ಫಾರ್ಮ್ ಹೌಸ್ನಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.
ಇಂದು ಬೆಳಗ್ಗೆ 10 ಗಂಟೆವರೆಗೆ ಬಸವನಗುಡಿಯಲ್ಲಿರುವ ನಿವಾಸದಲ್ಲಿ ಚಿರು ಅಂತಿಮದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಕನಕಪುರ ರಸ್ತೆಯ ನೆಲಗುಳಿ ಬಳಿ ಇರುವ ಧ್ರುವಾ ಸರ್ಜಾ ಫಾರ್ಮ್ ಹೌಸ್ಗೆ ಚಿರು ಅವರ ಪಾರ್ಥೀವ ಶರೀರ ಕೊಂಡೊಯ್ಯಲಾಗುತ್ತದೆ. ಮಧ್ಯಾಹ್ನ 3 ಗಂಟೆಯ ನಂತರ ಅಂತ್ಯಕ್ರಿಯೆ ನಡೆಯಲಿದೆ.ಬಸವನಗುಡಿ ನಿವಾಸಕ್ಕೆ ಇಂದು ಬೆಳಗ್ಗೆಯಿಂದಲೇ ಜನಸಾಗರವೇ ಹರಿದುಬರುತ್ತಿದೆ. ರಾತ್ರಿ 1 ಗಂಟೆಯವರೆಗೂ ಚಿತ್ರರಂಗದ ಗಣ್ಯರು, ಅಭಿಮಾನಿಗಳು, ಸಾರ್ವಜನಿಕರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಇಂದು ಬೆಳಗ್ಗೆ ಕೂಡ ಚಿತ್ರರಂಗದ ಪ್ರಮುಖರು ಆಗಮಿಸುತ್ತಿರುವುದು ಕಂಡುಬಂತು.ಚಿರು ಅವರು ನಿಧನರಾದ ಬಳಿಕ ಕೋವಿಡ್-19 ಪರೀಕ್ಷೆ ನಡೆಸಲಾಗಿತ್ತು. ಆದರೆ ನೆಗೆಟಿವ್ ವರದಿ ಬಂದಿದೆ ಎಂದು ಆಸ್ಪತ್ರೆಯ ವೈದ್ಯರು ದೃಢಪಡಿಸಿದ ಬಳಿಕವಷ್ಟೇ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ನಿನ್ನೆಯಿಂದ ಸಾವಿರಾರು ಮಂದಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಮನೆಯ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಚಿರಂಜೀವಿ ಸರ್ಜಾ ನಿಧನಕ್ಕೆ ಚಿತ್ರರಂಗ, ರಾಜಕೀಯ ವಲಯ ಸೇರಿದಂತೆ ಜನಸಾಮಾನ್ಯರು ಕಂಬನಿ ಮಿಡಿದಿದ್ದಾರೆ.
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 