ಕಂದಗಲ್ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ
Clean drinking water unit for Kandagal school
ಹೂವಿನಹಡಗಲಿ 30: ತಾಲೂಕಿನ ಕಂದಗಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಬೆಳಕು ಶೈಕ್ಷಣಿಕ ಚಾರಿಟಬಲ್ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ, ಶಾಲಾ ಬ್ಯಾಗ್ ಹಾಗೂ ನೋಟ್ಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಸಾಪ ಮಾಜಿ ಅಧ್ಯಕ್ಷ ಎಚ್.ಜಿ. ಪಾಟೀಲ್, ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶೈಕ್ಷಣಿಕ ಪ್ರಗತಿಗೆ ಸಂಘ-ಸಂಸ್ಥೆಗಳು ಮತ್ತು ಸಮಾಜದ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು. ಗ್ರಾಮೀಣ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿ ಯಶಸ್ಸು ಸಾಧಿಸಿದವರು ತಾವು ಓದಿದ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸುತ್ತಿರುವುದು ಶ್ಲಾಘನೀಯ ಎಂದರು.
ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಮೇಟಿ ಮಲ್ಲಿಕಾರ್ಜುನ ಮಾತನಾಡಿ, ಗ್ರಾಮೀಣ ಶಿಕ್ಷಣದ ಅಭಿವೃದ್ಧಿಯ ಉದ್ದೇಶದಿಂದ ಟ್ರಸ್ಟ್ ಕಾರ್ಯನಿರ್ವಹಿಸುತ್ತಿದ್ದು, ಶಾಲೆಯ 94 ವಿದ್ಯಾರ್ಥಿಗಳಿಗೆ ನೋಟ್ಪುಸ್ತಕ, ಬ್ಯಾಗ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡಲಾಗಿದೆ ಎಂದು ತಿಳಿಸಿದರು. ಟ್ರಸ್ಟ್ ಅಧ್ಯಕ್ಷ ಕೃಷ್ಣ ಪೂಜಾರ್, ಉಪಾಧ್ಯಕ್ಷ ಮಂಜುನಾಥ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಪರಮೇಶ್ವರ್ಪ, ಜಾತಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವೈ. ನಾಗರಾಜ್, ಮಾಜಿ ಅಧ್ಯಕ್ಷ ಮೇಟಿ ದೇವೇಂದ್ರ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಐ. ವೀರಣ್ಣ ಸ್ವಾಗತಿಸಿದರು. ಶಿಕ್ಷಕ ಗಂಗಾನಾಯ್ಕ ನಿರೂಪಿಸಿ, ಪ್ರಕಾಶ್ ವಂದಿಸಿದರು. ಟ್ರಸ್ಟ್ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 