ಸಹಕಾರಿ ಸಂಸ್ಥೆ ಕಾರ್ಯ ಶ್ಲಾಘನೀಯ: ದೊಡ್ಡಗೌಡರ
Co-operative work commendable: Doddagowdar
ನೇಸರಗಿ 20: ದಿನನಿತ್ಯದ ಬಳಕೆ ವಸ್ತುಗಳು ಗ್ರಾಮೀಣ ಮಟ್ಟದಲ್ಲಿ ಸಿಗುವಂತೆ ಮಾಡಿರುವ ಸಹಕಾರಿ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದು ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಹೇಳಿದರು.
ಸಮೀಪದ ದೇಶನೂರ ಗ್ರಾಮದ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ವತಿಯಿಂದ ನೂತನ ಕಟ್ಟಡ, ಹಳ್ಳಿ ಮಾರ್ಟ (ಮಾರಾಟ ಕೇಂದ್ರ)ನ್ನು ದಿ. 18 ರಂದು ಉದ್ಘಾಟಿಸಿ ಮಾತನಾಡಿ,ಹಳ್ಳಿಗಳಲ್ಲಿ ದಿನಸಿ ಬಳಕೆ ವಸ್ತುಗಳು ಸೇರಿದಂತೆ ವಿವಿಧ ವಸ್ತುಗಳ ಮಾರಾಟನ್ನು ಪ್ರಾರಂಭಿಸಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಸಾನಿಧ್ಯವನ್ನು ಕಿತ್ತೂರ ಮಡಿವಾಳ ರಾಜಯೋಗಿದ್ರ ಸ್ವಾಮೀಜಿ ವಹಿಸಿದ್ದರು. ಅಧ್ಯಕ್ಷತೆಯನ್ನು ಪಿಕೆಪಿಎಸ್ ಅಧ್ಯಕ್ಷ ಬಸವರಾಜ ಕೇದಾರಿ ವಹಿಸಿದ್ದರು. ಗ್ರಾ.ಪಂ ಅಧ್ಯಕ್ಷೆ ಸುರೇಖಾ ಕೇದಾರಿ, ಎಂ.ಡಿ.ನಂದೆನ್ನವರ, ವಿ.ಬಿ.ಗಿರನವರ, ವಾಯ್.ಆಯ್.ಮತ್ತಿಕೊಪ್ಪ, ರವಿರಾಜ ಇನಾಂದಾರ, ಜಿತೇಂದ್ರಕುಮಾರ, ಶ್ರೀಶೈಲ ಕಮತಗಿ, ಅಡಿವೆಪ್ಪ ಹೊಸಮನಿ, ಈರಣ್ಣ ವಾರದ, ಇನ್ನಿತರರು ಇದ್ದರು.
ನಾಗರಾಜ ಮುಚ್ಚಂಡಿ ನಿರೂಪಿಸಿದರು. ಸಂತೋಷ ತಿಳಗಂಜಿ ವಂದಿಸಿದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 