ಕುಡಚಿ ಮತಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗೆ ಬದ್ಧ: ಶಾಸಕ ತಮ್ಮಣ್ಣವರ
Committed to complete development of Kudachi constituency: MLA Thammanavara
ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ತಮ್ಮಣ್ಣವರ ಭೂಮಿ ಪೂಜೆ
ಪಾಲಬಾವಿ 23: ಕುಡಚಿ ಮತಕ್ಷೇತ್ರದ ಜನಪ್ರಿಯ ಶಾಸಕ ಮಹೇಂದ್ರ ತಮ್ಮಣ್ಣವರರವರು ಮಾ.23 ರಂದು ಕುಡಚಿ ಮತಕ್ಷೇತ್ರದ ಕುಡಚಿ, ಶಿರಗೂರ, ಹಾಲಶಿರಗೂರ, ಚಿಂಚಲಿ ಪಟ್ಟಣ ಕೂಡುವ ರಸ್ತೆಗೆ 285 ಕೋಟಿ ರೂಗಳ ವೆಚ್ಚದಲ್ಲಿ ಡಾಂಬರೀಕರಣ ರಸ್ತೆಗೆ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಮಹೇಂದ್ರ ತಮ್ಮಣ್ಣವರ ರವರು ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡುತ್ತ ಕುಡಚಿ ಮತಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಪಂಚ ಗ್ಯಾರಂಟಿಗಳ ಅನುಷ್ಠಾನದಲ್ಲಿಯೂ ನಾನು ನನ್ನ ಕುಡಚಿ ಕ್ಷೇತ್ರಕ್ಕೆ ಅತಿ ಹೆಚ್ಚು ಅನುದಾನವನ್ನು ತರುವ ಪ್ರಯತ್ನ ಮಾಡುತ್ತಿದ್ದೇನೆ. ರಸ್ತೆಗಳ ಡಾಂಬರೀಕರಣ, ಹೆಚ್ಚುವರಿ ಶಾಲಾ ಕೊಠಡಿ, ಸಮುದಾಯ ಭವನಗಳು, ದೇವಸ್ಥಾನಗಳಲ್ಲಿ ಫೇವರ್ಸ್ ಅಳವಡಿಕೆ, ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗಳು ಸೇರುದಂತೆ ಹಲವಾರು ಜನಪರ ಯೋಜನೆಯನ್ನು ನನ್ನ ಕ್ಷೇತ್ರಕ್ಕೆ ತರುವ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ. ಕ್ಷೇತ್ರದ ಜನರ ಆಶೀರ್ವಾದದಿಂದ ನಾನು ಶಾಸಕನಾಗಿದ್ದೇನೆ. ಕ್ಷೇತ್ರದ ಜನರ ಸೇವೆ ಮಾಡುವುದು ನನ್ನ ಕರ್ತವ್ಯವಾಗಿದೆ. ಕ್ಷೇತ್ರದ ಜನತೆಯ ಆಶೀರ್ವಾದವು ನನ್ನ ಮೇಲಿರಲಿ ಎಂದರು.
ಈ ಸಂದರ್ಭದಲ್ಲಿ ಕುಡಚಿ ಮತಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರದೀಪ್ ಹಾಲ್ಗುಣಿ, ಗುತ್ತಿಗೆದಾರ ಸದಾಶಿವ ದಳವಾಯಿ, ಗಿರಿಗೌಡ ಪಾಟೀಲ, ಮಾರುತಿ ಕಾಂಬಳೆ, ವರ್ಧಮಾನ ಶಿರಹಟ್ಟಿ, ಮಹಾದೇವ ಮಗದುಮ್ಮ, ಈಶ್ವರ ಮುರುಡಿ, ಕಲ್ಮೇಶ ಕಾಂಬಳೆ, ಲಕ್ಷ್ಮಣ ಬಾಂವೆ, ಸಂಜು ಚೌಗಲಾ, ನೀಲಪ್ಪ ಕಾಂಬಳೆ, ಇಸಾಕ್ ತಾಂಬೊಳಿ, ಬಾಬಾಸಾಹೇಬ್ ಮುಲ್ಲಾ, ಸುಭಾಷ ದಳವಾಯಿ, ಯಲ್ಲಪ್ಪ ಹುಲ್ಲೇನವರ, ಈಶ್ವರ ಕುಂಬಾರ, ಹಾಲಸಿದ್ದೇಶ್ವರ ದೇವಸ್ಥಾನದ ಅರ್ಚಕ ಗೂಳಪ್ಪ ಪೂಜಾರಿ, ಶಂಕರ ದಳವಾಯಿ, ಸಚಿನ್ ಹಳಕಲ್ಲ, ಸಹಾಯಕ ಅಭಿಯಂತರ ಕಾಂಬಳೆ, ಪಿಡಿಒ ಸೌಜನ್ಯ ಪ್ರಭಾಕರ, ಹಾಲಪ್ಪ ಸವದತ್ತಿ ಇತರರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 