ಹಿಂದೂ ರುದ್ರ ಭೂಮಿಯಲ್ಲಿ ಅವ್ಯವಸ್ಥೆ ದೂರು: ಪೌರಾಯುಕ್ತ ವಿವೇಕ್ ಬನ್ನೆ ಪರೀಶೀಲನೆ
Complaint regarding disorder at Hindu cremation ground: Municipal Commissioner Vivek Banne inspects
ಲೋಕದರ್ಶನ ವರದಿ
ದಾಂಡೇಲಿ 06: ದಾಂಡೇಲಿಯ ಪಟೇಲ ನಗರದ ಹಿಂದೂ ರುದ್ರ ಭೂಮಿಯಲ್ಲಿ ಅವ್ಯವಸ್ಥೆ ಇದೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ನಗರಸಭೆ ಪೌರಾಯುಕ್ತ ವಿವೇಕ್ ಬನ್ನೆಯವರು ಸಿಬ್ಬಂದಿಯೊಂದಿಗೆ ಬುಧವಾರ ಸ್ಥಳಕ್ಕೆ ಭೆೇಟಿ ನೀಡಿ ಪರೀಶೀಲನೆ ನಡೆಸಿದರು. ಪರೀಶೀಲನೆ ವೇಳೆ ರುದ್ರಭೂಮಿಯಲ್ಲಿನ ಚಿತಾಗಾರದ ಅವ್ಯವಸ್ಥೆಯನ್ನು ತಕ್ಷಣ ಸರಿ ಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ರಾತ್ರಿ ವೇಳೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ವಿದ್ಯುತ್ ದೀಪಗಳನ್ನು ಅಳವಡಿಸುವ ಕಾರ್ಯಕ್ಕೆ ಸಿಬ್ಬಂದಿಯಿಂದ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ರುದ್ರಭೂಮಿಯಲ್ಲಿನ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ತ್ವರಿತವಾಗಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವದು ಎಂದು ಪೌರಾಯುಕ್ತರು ತಿಳಿಸಿದರು. ಸ್ಥಳೀಯ ಅಹವಾಲುಗಳಿಗೆ ಸ್ಪಂದಿಸಿ ನಗರಸಭೆ ತಕ್ಷಣವೇ ಪರೀಶೀಲನೆ ನಡೆಸಿರುವದು ಸಾರ್ವಜನಿಕರಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 