ಜಲ ಮೂಲಗಳ ಸಂರಕ್ಷಣೆ - ಪುನಶ್ಚೇತನ ಆದ್ಯತೆಯಾಗಲಿ
ಬೆಳಗಾವಿ: 11 :ಮುಂದಿನ ಪೀಳೀಗೆಗೆ ನಾವು ನೀರಿನ ಸಂರಕ್ಷಣೆ, ಸಮುದಾಯದ ನೈರ್ಮಲ್ಯ, ಬಗ್ಗೆ ಜಾಗೃತಿ ಮೂಡಿಸುವುದು ಮಹತ್ವವಾಗಿದ್ದು ಹಾಗೂ ಜಲಮೂಲಗಳು ಕಲುಸಿತವಾಗಿದೆ ಹಾಗೆ ನೋಡಿಕೊಂಡು ಅವುಗಳ ಸಂರಕ್ಷಣೆ ಹಾಗೂ ಪುನಶ್ಚೇತನಗೊಳಿಸುವುದು ನಮ್ಮ ಮೊದಲ ಆದ್ಯತಯಾಗಬೇಕು ಎಂದು ಬೆಳಗಾವಿ ಗ್ರಾಮಿಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರಾದ ಕೆ.ಎಸ್.ಅಸೊಟಿ ಕರೆ ನೀಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೆಳಗಾವಿ, ಜಿಲ್ಲಾ ಪಂಚಾಯತಿ ಬೆಳಗಾವಿ, ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆ ಬೆಳಗಾವಿ ಹಾಗೂ ಕಾರಲಗಾ ಗ್ರಾಮ ಪಂಚಾಯತಿ ಸಂಯುಕ್ತ ಆಶ್ರಯದಲ್ಲಿ ಖಾನಾಪುರ ತಾಲೂಕಿನ ಕಾರಲಗಾ ಗ್ರಾಮದ ಸಣ್ಣ ಜಲಮೂಲ (ಕೆರೆ) ಪುನಶ್ಚೇತನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಶ್ರಮಧಾನದ ಮೂಲಕ ಕೆರೆ ಸ್ವಚ್ಛತಾಕಾರ್ಯ ಮಾಡಲಾಯಿತು. ಪಿ ಆರ್ ಎ ಮೂಲಕ ಜಲ ಮೂಲಗಳ ಸಂರಕ್ಷಣೆ ಬಗ್ಗೆ ಸಂಸ್ಥೆಯ ಎಂ ಕೆ ಕುಂದರಗಿ ಮಾಹಿತಿ ನಿಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾದ ಸುಪ್ರೀಯಾ ಗೊಪಾಲ ಕುಟ್ರೆ ಅವರು ಭೂಮಿ ಪೂಜೆ ನೇರವೇರಿಸಿದರು. ಗ್ರಾ. ಪಂ. ಅಧ್ಯಕ್ಷರಾದ ಬಲರಾಮ ಗುರವ, ಉಪಾದ್ಯಕ್ಷರಾದ ಇಂದಿರಾ ಡಿ ಪಾಟಿಲ, ಸದಸ್ಯರಾದ ರಾಮ ಕಡೋಲ್ಕರ, ಸಹಾಯಕ ಕಾರ್ಯಪಾಲಕ ಅಭಿಯಂತರಾದ ಸುಭಾಶ ನಾಯ್ಕ, ಕಿರಣ ಕಣ್ಣೂರ್ಕರ, ಹಿರಿಯ ಭೂಗರ್ಭ ತಜ್ಞ ಎಸ್ ಜಿ ಜೋಶಿ, ಗ್ರಾ ಪಂ ಸದಸ್ಯರು ಮತ್ತು ಗ್ರಾಮ ಪಂಚಾಯತಿ ಕಾರ್ಯದಶರ್ಿಯಾದ ಶಾಂತಾಬಾಯಿ ಕೋಲಕಾರ,
ಗ್ರಾ ಪಂ ಕುಡಿಯುವ ನೀರು ಹಾಗೂ ನೈಮರ್ುಲ್ಯ ಸಮಿತಿ ಸದಸ್ಯರಾದ ತಾವನಪ್ಪಾ ಲವಗಿ, ಸ್ವ-ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 