ಸಂವಿಧಾನ ದಿನಾಚರಣೆ
Constitution Day Celebration
ಧಾರವಾಡ 26: ಧಾರವಾಡ ಗ್ರಾಮೀಣ ಕ್ಷೇತ ಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ "ಸಂವಿಧಾನ ದಿನಾಚರಣೆ " ಅಂಗವಾಗಿ ಭಾರತ ಸಂವಿಧಾನ ಪೀಠಿಕೆಯನ್ನು ಓದುವುದರ ಮೂಲಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ (ಪ್ರಮಾಣ ವಚನ) ಸ್ವೀಕರಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಮಾತನಾಡುತ್ತಾ ನವೆಂಬರ್ 26 ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ದಿನ. ಪ್ರತಿ ಭಾರತೀಯನಿಗೂ ಸಮಾನತೆಯ ಹಕ್ಕು, ಮುಕ್ತವಾಗಿ ಬದುಕುವ ಹಕ್ಕು ಮತ್ತು ಸ್ವಂತ ನಿರ್ಧಾರ ತೆಗೆದುಕೊಳ್ಳುವ ಹಕ್ಕನ್ನು ನೀಡುವ ದಾಖಲೆಯನ್ನು ರಚಿಸಿದ ದಿನ ಇದಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನು ರೂಪಿಸುವ ಕರ್ತವ್ಯಗಳೊಂದಿಗೆ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆಯೂ ಕರೆ ನೀಡಿದರು.
ಕೇತ್ರ ಸಮನ್ವಯಾಧಿಕಾರಿ ಕುಮಾರ ಕೆ.ಎಫ್, ಮಾತನಾಡಿ ನಮ್ಮ ಸಂವಿಧಾನದ ರಚನೆಕಾರರ ದೃಷ್ಟಿಕೋನ, ಸುಧಾರಣೆಗಳನ್ನು ಪ್ರತಿಬಿಂಬಿಸುತ್ತವೆ ಮತ್ತು ವಿಕಸಿತ ಭಾರತದ ಪ್ರಗತಿಗೆ ಮಾರ್ಗದರ್ಶನ ನೀಡುತ್ತವೆ ಎಂದು ಹೇಳಿದರು. ನಾಗರಿಕರ ಹಕ್ಕುಗಳನ್ನು ಸುರಕ್ಷಿತಗೊಳಿಸಲು ಸಂವಿಧಾನ ನಿರ್ಮಾತೃಗಳು ಸಂವಿಧಾನವನ್ನು ರೂಪಿಸಿದರು ಎಂದು ಅವರು ಹೇಳಿದರು.
ಇ.ಸಿ.ಓ, ಬಿ.ಆರ್.ಪಿ, ಸಿ.ಆರ್.ಪಿ, ಬಿ.ಐ.ಇ.ಆರ್.ಟಿ, ಬಿಇಓ ಹಾಗೂ ಬಿಆರಸಿ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಭಾರತ ಸಂವಿಧಾನ ಪೀಠಿಕೆಯನ್ನು ಓದುವುದರ ಮೂಲಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ (ಪ್ರಮಾಣ ವಚನ) ಸ್ವೀಕರಿಸಲಾಯಿತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 