ಶ್ರೀನಿವಾಸ ಶಾಲೆಯಲ್ಲಿ ಸಂವಿಧಾನ ದಿನಾಚರಣೆ
ಲೋಕದರ್ಶನ ವರದಿ
ಮೂಡಲಗಿ 26: ಇಲ್ಲಿಯ ಶ್ರೀ ಶ್ರೀನಿವಾಸ ಸ್ಕೂಲ್ಸನಲ್ಲಿ ಇಂದು ಸಂವಿಧಾನ ದಿನಾಚರಣೆಯ ಪ್ರಯುಕ್ತವಾಗಿ ಕಾನೂನು ಸಾಕ್ಷರತಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ಜೆಎಮ್ಎಫ್ಸಿ ಮೂಡಲಗಿಯ ಸಿವಿಲ್ ನ್ಯಾಯಾಧೀಶ ಸುರೇಶ ಎಸ್.ಎನ್., ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ಕಾನೂನು ಸಾಕ್ಷರತಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಭಾರತದ ಸಂವಿಧಾನ ರಚನೆಯಲ್ಲಿ ತೊಡಗಿಕೊಂಡ ಮಹನೀಯರನ್ನು ಸ್ಮರಿಸಿದರು. ವಿದ್ಯಾರ್ಥಿಗಳಿಗೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ಕುರಿತು ತಿಳಿಹೇಳಿದರು.
ವಿಶೇಷ ಉಪನ್ಯಾಸ ನೀಡಿದ ವಕೀಲರುಗಳಾದ ಎಮ್ ಐ ಬಡಿಗೇರ ಹಾಗೂ ಬಿ. ಎನ್ ಸಣ್ಣಕ್ಕಿ ವಿದ್ಯಾರ್ಥಿಗಳಿಗೆ ಕಾನೂನು ಹಾಗೂ ಸಂವಿಧಾನದ ಕುರಿತು ವಿವರಿಸಿದರು. ಮೊಬೈಲ್, ಅಂತಜರ್ಾಲ ಹಾಗೂ ಅಪ್ರಾಪ್ತರು ವಾಹನ ಚಾಲನೆ ಮಾಡುವುದರಿಂದಾಗುವ ದುಷ್ಪರಿಣಾಮಗಳನ್ನು ವಿವರಿಸಿದರು.
ವಿದ್ಯಾರ್ಥಿ ರಮೇಶ ಬಡಗನ್ನವರ ಭಾರತದ ಸಂವಿಧಾನದ ಮಹತ್ವವನ್ನು ಕುರಿತು ಮಾತನಾಡಿದರು.
ಕೆ.ಪಿ. ಮಗದುಮ, ಎಸ್.ವೈ. ಹೊಸಟ್ಟಿ, ಡಿ ಎಸ್ ರೊಡ್ಡನ್ನವರ, ವಿ.ಕೆ. ಪಾಟೀಲ, ಕೆ.ಎಲ್ ಹುಣಿಶ್ಯಾಳ, ವಿ.ವಿ. ನಾಯ್ಕ, ಎ.ಎಚ್. ಗೊಡ್ಯಾಗೋಳ ಅತಿಥಿಗಳಾಗಿದ್ದರು. ಶಾಲೆಯ ಪ್ರಾಚಾರ್ಯರಾದ ಮನೋಜ ಭಟ್ ಅಧ್ಯಕ್ಷತೆವಹಿಸಿದ್ದರು. ಶರ್ಮಿಳಾ ಪ್ರಾರ್ಥನಾಗೀತೆ ಹಾಡಿದರು. ಕು. ಕಾವ್ಯಾ ಸ್ವಾಗತಿಸಿದರು. ಕು. ಚಂದ್ರಿಕಾ ನಿರೂಪಿಸಿದರು.
ತಾಲೂಕು ಕಾನೂನು ಸಮಿತಿ, ವಕೀಲರ ಸಂಘದ ವಿವಿಧ ಪದಾಧಿಕಾರಿಗಳು, ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 