ಶಾಲಾ ವಿದ್ಯಾರ್ಥಿಗಳಿಗೆ 26 ರಿಂದ ಸಂವಿಧಾನ ಪಠಣ ಕಡ್ಡಾಯ
ಮುಂಬೈ, ಜನವರಿ 23,ಗಣರಾಜ್ಯ ದಿನವಾದ ಇದೇ 26 ರಿಂದ ಮಹಾರಾಷ್ಟ್ರದ ಶಾಲಾ ವಿದ್ಯಾರ್ಥಿಗಳು ಬೆಳಗಿನ ಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಬೇಕು ಎಂದು ಶಾಲಾ ಶಿಕ್ಷಣ ಸಚಿವೆ ವರ್ಷಾ ಗಾಯಕ್ವಾಡ್ ಕಟ್ಟಪ್ಪಣೆ ಮಾಡಿದ್ದಾರೆ. ಸಂವಿಧಾನದ ಪ್ರಸ್ತಾವನೆ ಓದುವುದು ಸಂವಿಧಾನದ ಸಾರ್ವಭೌಮತೆ, ಸರ್ವರ ಒಳಿತು, ಕಲ್ಯಾಣ ಅಭಿಯಾನದ ಒಂದು ಭಾಗವಾಗಿದೆ ಎಂದೂ ಸರಕಾರದ ಸುತ್ತೋಲೆ ಸ್ಪಷ್ಟಪಡಿಸಿದೆ. ಶಾಲೆಯಲ್ಲಿ ಪ್ರತಿದಿನ ಬೆಳಗಿನ ಪ್ರಾರ್ಥನೆ ಮುಗಿದ ನಂತರ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆ ಓದಬೇಕು. ಇದರಿಂದ ಅವರಿಗೆ ಸಂವಿಧಾನದ ಪ್ರಾಮುಖ್ಯತೆ ಅರಿವಾಗಲಿದೆ ಇದು ಹಿಂದಿನ ಸರಕಾರ ನಿರ್ಣಯ. ಆದರೆ, ನಾವು ಇದನ್ನು 26ರಿಂದ ಜಾರಿಗೆ ತರುತ್ತಿದ್ದೇವೆ ಎಂದು ಅವರು ಹೇಳಿದರು.ಕಾಂಗ್ರೆಸ್-ಎನ್ಸಿಪಿ ಅಧಿಕಾರದ್ದಾಗ ಇದಕ್ಕೆ ಸಂಬಂಧಿಸಿದಂತೆ 2013ರ ಫೆಬ್ರವರಿಯಲ್ಲಿ ನಿರ್ಣಯ ಹೊರಡಿಸಲಾಗಿತ್ತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 